Featured

ಜನಪರ ವಿವಿಧ ಬೇಡಿಕೆ ಹಾಗೂ ಸುಜ್ಲಾನ್ ಭೂ ಅವ್ಯವಹಾರದ ಬಗ್ಗೆ ಜನಾಂದೋಲನ ಸಭೆ : ವಿನಯ ಕುಮಾರ್ ಸೊರಕೆ : vishwanews24

ಜನಪರ ವಿವಿಧ ಬೇಡಿಕೆ ಹಾಗೂ ಸುಜ್ಲಾನ್ ಭೂ ಅವ್ಯವಹಾರದ ಬಗ್ಗೆ ಜನಾಂದೋಲನ ಸಭೆ : ವಿನಯ ಕುಮಾರ್ ಸೊರಕೆ

ಕಾಪು: ಕೆ.ಐ.ಡಿ.ಬಿ ವತಿಯಿಂದ 1200 ಎಕರೆ ಜಮೀನನ್ನು ಭೂಸ್ವಾಧೀನಗೊಳಿಸಿ ಸುಜ್ಲಾನ್ ಪಡೆದುಕೊಂಡಿದ್ದು ಸದ್ಯ ಈ ಜಾಗವನ್ನು ಖಾಸಾಗಿ ಕಂಪೆನಿಗಳಿಗೆ – ವ್ಯಕ್ತಿಗಳಿಗೆ ಮಾರಾಟ ಮಾಡಿರುವುದಲ್ಲದೆ ಅದರಜತೆ ವಿವಿಧ ಜನಪರ ಬೇಡಿಕೆಗೆ ಆಗ್ರಹಿಸಿ ಸುಜ್ಲಾನ್ ಕಂಪೆನಿಯ ಮುಂಭಾಗದಲ್ಲಿ ಜನಾಮದೋಲನ ಸಬೆ ನಡೆಸುವುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕಾಪುವಿನಲ್ಲಿ ನಡೆದ ಪತ್ರೀಕಾಗೊಷ್ಠಿಯಲ್ಲಿ ತಿಳಿಸಿದರು.

ಕೆ.ಐ.ಡಿ.ಬಿ ಜಾಗವನ್ನು ಪಡೆದುಕೊಂಡಿರುವ ಕಂಪೆನಿಗೆ ನಷ್ಟವಾದರೇಆಜಾಗವನ್ನು ಮರಳಿ ಸರ್ಕಾರಕ್ಕೆ ನೀಡಬೇಕೆ ಹೊರತು ಅದನ್ನು ರೀಯಲ್ ಎಸ್ಟೇಟ್ ಉದ್ಯಮವನ್ನಾಗಿ ಮಾಡಬಾರದು ಅದರಬದಲಿಗೆ ಕ್ಷೇತ್ರದಲ್ಲಿ 15 ಸಾವಿರಕ್ಕೂ ಅಧಿಕ ಮಂದಿ ವಸತಿ ವಂಚಿತರಿಗೆ ಮನೆ ನಿವೇಶನ ನೀಡಬೇಕೆಂದು ಅವರು ಆಗ್ರಹ ನಡೆಸಿದರು.

ವಿವಿಧ ಕಂಪೆನಿಗಳಿಗೆ ಮಾರಾಟವಾದ ಜಾಗದಲ್ಲಿ ಹತ್ತಾರು ಇಂಡಸ್ಟ್ರೀಗಳು ಆರಂಭವಾಗಿದೆ ಅದರಲ್ಲಿ ಸ್ಥಳಿಯರಿಗೆ ಉದ್ಯೋಗವನ್ನು ನೀಡದೆ ವಂಚಿಸಿದ್ದು ಅತ್ಯಂತ ಬೇಸರದ ಸಂಗತಿಯಾಗಿದೆ ಮಾತ್ರವಲ್ಲದೆ ನಂದಿಕೂರು ಪ್ರಸಿದ್ಧಿ ಪಡೆದ ದೇವರ ಕಾಡು ಉಳಿಸಿ ಸೂಕ್ತ ರಕ್ಷಣೆ ನೀಡುವ ಬದಲು ಅಲ್ಲಿನ ನೂರು ಎಕರೆಜಾಗವನ್ನು ಸುಜ್ಲಾನ್ ಕಂಪೆನಿ ಖಾಸಾಗಿಯವರಿಗೆ ಮಾರಾಟ ಮಾಡಿರುವುದು ಧಾರ್ಮಿಕ ಭಾವನೆಗೆ ದಕ್ಕೆ ಬಂದಿದೆ ಎಂದರು.
ಪಡುಬಿದ್ರಿ ಕಾರ್ಕಳ ಪಿ.ಡಬ್ಲ್ಯೂ.ಡಿ ಮುಖ್ಯ ರಸ್ತೆಯಲ್ಲಿ ಪ್ರಸ್ತಾವನೆಯಲ್ಲಿರುವ ಟೋಲ್ ಸಂಗ್ರಹದ ಯೋಜನೆ ಕೈಬಿಡಬೇಕು ಮತ್ತು ಹೆಜಮಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಾಹನಗಳಿಗೆ ಹೆಜಮಾಡಿ ಟೋಲ್‍ನಲ್ಲಿ ವಿನಾಯಿತಿ ನೀಡಬೇಕೆಂದು ತಿಳಿಸಿದರು.
ಫಲಿಮಾಡು ಅಣೆಕಟ್ಟಿನ ನೀರನ್ನು ಸುಜ್ಲಾನ್ ಕಂಪೆನಿಗಳಿಗೆ ಕೊಳವೆ ಮೂಲಕ ನೀರು ಸರಬರಾಜು ಮಾಡುವುದನ್ನು ನಿಲ್ಲಿಸುವಂತೆಹಾಗೂ ಜಲಜೀವನ್ ಮಿಷನ್ ಯೋಜನೆಯ ಮುಖಾಂತರ ನಡೆದ ಕಾಮಗಾರಿಯ ಅವ್ಯವಹಾರದ ಬಗ್ಗೆ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವದೆಂದು ಸೊರಕೆ ತಿಳಿಸಿದ್ದಾರೆ.

Vishwa News 24

Recent Posts

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

3 hours ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

3 hours ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

3 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

3 hours ago

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು – vishwanews24

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…

5 hours ago

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ – vishwanews24

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ…

5 hours ago