Featured

ಜನಪ್ರಿಯ ಕಿರುತೆರೆ ನಟ ರಿತುರಾಜ್ ಸಿಂಗ್ ಹೃದಯಾಘಾತದಿಂದ ನಿಧನ – vishwanews24

ಜನಪ್ರಿಯ ಕಿರುತೆರೆ ನಟ ರಿತುರಾಜ್ ಸಿಂಗ್ ಹೃದಯಾಘಾತದಿಂದ ನಿಧನ

ಮುಂಬಯಿ: ಹೃದಯಸ್ತಂಭನದಿಂದ ಖ್ಯಾತ ಕಿರುತೆರೆ ನಟ ರಿತುರಾಜ್ ಸಿಂಗ್(59) ನಿಧನರಾಗಿದ್ದಾರೆ.

ಮಂಗಳವಾರ(ಫೆ.20 ರಂದು) ತಡರಾತ್ರಿ ಅವರು ನಿಧನರಾಗಿದ್ದಾರೆ ಎಂದು ಅವರ ಸಹೋದ್ಯೋಗಿ ಮತ್ತು ಆತ್ಮೀಯ ಸ್ನೇಹಿತ ಅಮಿತ್ ಬೆಹ್ಲ್ ತಿಳಿಸಿದ್ದಾರೆ.

ಅವರಿಗೆ ತಡರಾತ್ರಿ 12:30ರ ವೇಳೆಗೆ ಹೃದಯಸ್ತಂಭನವಾಗಿದೆ. ಅವರು ಕಳೆದ ಕೆಲ ಸಮಯದಿಂದ ಪ್ಯಾಂಕಿಯಾಟಿಕ್‌ ಕಾಯಿಲೆಯಿಂದ (ಮೇದೋಜ್ಜೀರಕ ಗ್ರಂಥಿಗೆ ಸಂಬಂಧಿಸಿದ ಸಮಸ್ಯೆ) ಬಳಲುತ್ತಿದ್ದರು. ಇದಕ್ಕೆ ಅವರು ಚಿಕಿತ್ಸೆಯನ್ನು ಪಡೆಯುತ್ತಿದ್ದರು ಎಂದು ವರದಿಯಾಗಿದೆ.

ಕಿರುತೆರೆಯಲ್ಲಿ ಬಹಳ ವರ್ಷದಿಂದ ಬಣ್ಣ ಹಚ್ಚಿರುವ ಅವರು, ಇತ್ತೀಚೆಗೆ ಹಿಂದಿಯ ಜನಪ್ರಿಯ ಧಾರಾವಾಹಿ ʼಅನುಪಮಾʼದಲ್ಲಿ ಕಾಣಿಸಿಕೊಂಡಿದ್ದರು. ಟಿವಿ ಹಾಗೂ ಸಿನಿಮಾರಂಗ ಎರಡರಲ್ಲೂ ಗುರುತಿಸಿಕೊಂಡಿದ್ದ ಅವರು,’ಬನೇಗಿ ಅಪ್ನಿ ಬಾತ್’ , ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’, ‘ತ್ರಿದೇವಿಯಾನ್’, ‘ದಿಯಾ ಔರ್ ಬಾತಿ ಹಮ್’ ಮುಂತಾದ ಧಾರಾವಾಹಿ ಸೇರಿದಂತೆ ವರುಣ್ ಧವನ್ ಮತ್ತು ಆಲಿಯಾ ಭಟ್ ಜೊತೆಗೆ ‘ಹಂಪ್ಟಿ ಶರ್ಮಾ ಕಿ ದುಲ್ಹನಿಯಾ’ ಸಿನಿಮಾದಲ್ಲಿ ನಟಿಸಿದ್ದರು. ಆರ್ ಮಾಧವನ್, ದಿವಂಗತ ನಟ ಇರ್ಫಾನ್ ಮತ್ತು ಸುರೇಖಾ ಸಿಕ್ರಿ, ಇತರರೊಂದಿಗೆ ನಟಿಸಿದ್ದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

7 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

8 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

8 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

8 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

8 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

9 hours ago