ಮುಂಬಯಿ: ಹೃದಯಸ್ತಂಭನದಿಂದ ಖ್ಯಾತ ಕಿರುತೆರೆ ನಟ ರಿತುರಾಜ್ ಸಿಂಗ್(59) ನಿಧನರಾಗಿದ್ದಾರೆ.
ಮಂಗಳವಾರ(ಫೆ.20 ರಂದು) ತಡರಾತ್ರಿ ಅವರು ನಿಧನರಾಗಿದ್ದಾರೆ ಎಂದು ಅವರ ಸಹೋದ್ಯೋಗಿ ಮತ್ತು ಆತ್ಮೀಯ ಸ್ನೇಹಿತ ಅಮಿತ್ ಬೆಹ್ಲ್ ತಿಳಿಸಿದ್ದಾರೆ.
ಅವರಿಗೆ ತಡರಾತ್ರಿ 12:30ರ ವೇಳೆಗೆ ಹೃದಯಸ್ತಂಭನವಾಗಿದೆ. ಅವರು ಕಳೆದ ಕೆಲ ಸಮಯದಿಂದ ಪ್ಯಾಂಕಿಯಾಟಿಕ್ ಕಾಯಿಲೆಯಿಂದ (ಮೇದೋಜ್ಜೀರಕ ಗ್ರಂಥಿಗೆ ಸಂಬಂಧಿಸಿದ ಸಮಸ್ಯೆ) ಬಳಲುತ್ತಿದ್ದರು. ಇದಕ್ಕೆ ಅವರು ಚಿಕಿತ್ಸೆಯನ್ನು ಪಡೆಯುತ್ತಿದ್ದರು ಎಂದು ವರದಿಯಾಗಿದೆ.
ಕಿರುತೆರೆಯಲ್ಲಿ ಬಹಳ ವರ್ಷದಿಂದ ಬಣ್ಣ ಹಚ್ಚಿರುವ ಅವರು, ಇತ್ತೀಚೆಗೆ ಹಿಂದಿಯ ಜನಪ್ರಿಯ ಧಾರಾವಾಹಿ ʼಅನುಪಮಾʼದಲ್ಲಿ ಕಾಣಿಸಿಕೊಂಡಿದ್ದರು. ಟಿವಿ ಹಾಗೂ ಸಿನಿಮಾರಂಗ ಎರಡರಲ್ಲೂ ಗುರುತಿಸಿಕೊಂಡಿದ್ದ ಅವರು,’ಬನೇಗಿ ಅಪ್ನಿ ಬಾತ್’ , ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’, ‘ತ್ರಿದೇವಿಯಾನ್’, ‘ದಿಯಾ ಔರ್ ಬಾತಿ ಹಮ್’ ಮುಂತಾದ ಧಾರಾವಾಹಿ ಸೇರಿದಂತೆ ವರುಣ್ ಧವನ್ ಮತ್ತು ಆಲಿಯಾ ಭಟ್ ಜೊತೆಗೆ ‘ಹಂಪ್ಟಿ ಶರ್ಮಾ ಕಿ ದುಲ್ಹನಿಯಾ’ ಸಿನಿಮಾದಲ್ಲಿ ನಟಿಸಿದ್ದರು. ಆರ್ ಮಾಧವನ್, ದಿವಂಗತ ನಟ ಇರ್ಫಾನ್ ಮತ್ತು ಸುರೇಖಾ ಸಿಕ್ರಿ, ಇತರರೊಂದಿಗೆ ನಟಿಸಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…