ಮುಂಬಯಿ: ಹೃದಯಸ್ತಂಭನದಿಂದ ಖ್ಯಾತ ಕಿರುತೆರೆ ನಟ ರಿತುರಾಜ್ ಸಿಂಗ್(59) ನಿಧನರಾಗಿದ್ದಾರೆ.
ಮಂಗಳವಾರ(ಫೆ.20 ರಂದು) ತಡರಾತ್ರಿ ಅವರು ನಿಧನರಾಗಿದ್ದಾರೆ ಎಂದು ಅವರ ಸಹೋದ್ಯೋಗಿ ಮತ್ತು ಆತ್ಮೀಯ ಸ್ನೇಹಿತ ಅಮಿತ್ ಬೆಹ್ಲ್ ತಿಳಿಸಿದ್ದಾರೆ.
ಅವರಿಗೆ ತಡರಾತ್ರಿ 12:30ರ ವೇಳೆಗೆ ಹೃದಯಸ್ತಂಭನವಾಗಿದೆ. ಅವರು ಕಳೆದ ಕೆಲ ಸಮಯದಿಂದ ಪ್ಯಾಂಕಿಯಾಟಿಕ್ ಕಾಯಿಲೆಯಿಂದ (ಮೇದೋಜ್ಜೀರಕ ಗ್ರಂಥಿಗೆ ಸಂಬಂಧಿಸಿದ ಸಮಸ್ಯೆ) ಬಳಲುತ್ತಿದ್ದರು. ಇದಕ್ಕೆ ಅವರು ಚಿಕಿತ್ಸೆಯನ್ನು ಪಡೆಯುತ್ತಿದ್ದರು ಎಂದು ವರದಿಯಾಗಿದೆ.
ಕಿರುತೆರೆಯಲ್ಲಿ ಬಹಳ ವರ್ಷದಿಂದ ಬಣ್ಣ ಹಚ್ಚಿರುವ ಅವರು, ಇತ್ತೀಚೆಗೆ ಹಿಂದಿಯ ಜನಪ್ರಿಯ ಧಾರಾವಾಹಿ ʼಅನುಪಮಾʼದಲ್ಲಿ ಕಾಣಿಸಿಕೊಂಡಿದ್ದರು. ಟಿವಿ ಹಾಗೂ ಸಿನಿಮಾರಂಗ ಎರಡರಲ್ಲೂ ಗುರುತಿಸಿಕೊಂಡಿದ್ದ ಅವರು,’ಬನೇಗಿ ಅಪ್ನಿ ಬಾತ್’ , ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’, ‘ತ್ರಿದೇವಿಯಾನ್’, ‘ದಿಯಾ ಔರ್ ಬಾತಿ ಹಮ್’ ಮುಂತಾದ ಧಾರಾವಾಹಿ ಸೇರಿದಂತೆ ವರುಣ್ ಧವನ್ ಮತ್ತು ಆಲಿಯಾ ಭಟ್ ಜೊತೆಗೆ ‘ಹಂಪ್ಟಿ ಶರ್ಮಾ ಕಿ ದುಲ್ಹನಿಯಾ’ ಸಿನಿಮಾದಲ್ಲಿ ನಟಿಸಿದ್ದರು. ಆರ್ ಮಾಧವನ್, ದಿವಂಗತ ನಟ ಇರ್ಫಾನ್ ಮತ್ತು ಸುರೇಖಾ ಸಿಕ್ರಿ, ಇತರರೊಂದಿಗೆ ನಟಿಸಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…