Featured

ಜನಪ್ರಿಯ ಜಾನಪದ ಗಾಯಕಿ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ ನಿಧನ – vishwanews24

ಜನಪ್ರಿಯ ಜಾನಪದ ಗಾಯಕಿ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ ನಿಧನ..

ಪಿಎಂ ಮೋದಿ ಸೇರಿದಂತೆ ಗಣ್ಯರ ಸಂತಾಪ

ನವದೆಹಲಿ: ಜನಪ್ರಿಯ ಜಾನಪದ ಗಾಯಕಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ ಅವರು ಕ್ಯಾನ್ಸರ್‌ನಿಂದ ಮಂಗಳವಾರ ಸಂಜೆ ನಿಧನರಾಗಿದ್ದಾರೆ.

72 ವಯಸ್ಸಿನ ಖ್ಯಾತ ಗಾಯಕಿ ಶಾರದಾ ಅವನ್ನು ಅನಾರೋಗ್ಯದ ಹಿನ್ನೆಲೆ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು.

ಅಕ್ಟೋಬರ್.25 ರಿಂದ ಆಸ್ಪತ್ರೆಯ ಆಂಕೊಲಾಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 2017 ರಲ್ಲಿ ಅವರಿಗೆ ಮಲ್ಟಿಪಲ್ ಮೈಲೋಮಾ ರೋಗನಿರ್ಣಯ ದೃಢಪಟ್ಟಿತ್ತು. ಇದು ಮೂಳೆ ಮಜ್ಜೆಯ ಮೇಲೆ ಪರಿಣಾಮ ಬೀರುವ ಒಂದು ರೀತಿಯ ಕ್ಯಾನ್ಸರ್. ಸಿನ್ಹಾ ಅವರನ್ನು ವೆಂಟಿಲೇಟರ್‌ನಲ್ಲಿರಿಸಲಾಗಿತ್ತು.

‘ಕಾರ್ತಿಕ್ ಮಾಸ್ ಇಜೋ ರಿಯಾ’, ‘ಕೋಯಲ್ ಬಿನ್’ ತರಹದ ಜನಪದ ಗೀತೆಗಳು, ‘ಗ್ಯಾಂಗ್ಸ್‌ ಆಫ್ ವಸೇಪುರ್’ ಹಿಂದಿ ಸಿನಿಮಾದ ‘ತಾರ್‌ ಬಿಜಿಲಿ’, ‘ಹಮ್‌ ಆಪ್ಕೆ ಹೈ ಕೌನ್’ ಚಿತ್ರದ ‘ಬಾಬುಲ್’ ಹಾಡುಗಳ ಗಾಯನದಿಂದ ಶಾರದಾ ಅವರು ಛಾಪು ಮೂಡಿಸಿದ್ದರು. ಶಾರದಾ ಅವರನ್ನು ಅಭಿಮಾನಿಗಳು ‘ಬಿಹಾರಿ ಕೋಕಿಲಾ’ ಎಂದು ಕರೆಯುತ್ತಿದ್ದರು.

ಶಾರದಾ ಅವರು ಭೋಜಪುರಿ, ಮೈಥಿಲಿ ಭಾಷೆಯ ಜನಪದ ಗೀತೆಗಳನ್ನು ಹಾಡುತ್ತಿದ್ದರು. ಶಾರದಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ‘ಪ್ರಸಿದ್ಧ ಜಾನಪದ ಗಾಯಕಿ ಶಾರದಾ ಸಿನ್ಹಾ ಜೀ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಮೈಥಿಲಿ ಮತ್ತು ಭೋಜ್‌ಪುರಿ ಜಾನಪದ ಹಾಡುಗಳು ಹಲವು ದಶಕಗಳಿಂದ ಜನಪ್ರಿಯವಾಗಿವೆ. ಅವರ ನಿಧನ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ನನ್ನ ಸಂತಾಪಗಳು’ ಎಂದು ಪ್ರಧಾನಿ ಮೋದಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

3 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

3 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

4 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

6 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

7 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

20 hours ago