ನವದೆಹಲಿ: ಜನಪ್ರಿಯ ಜಾನಪದ ಗಾಯಕಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ ಅವರು ಕ್ಯಾನ್ಸರ್ನಿಂದ ಮಂಗಳವಾರ ಸಂಜೆ ನಿಧನರಾಗಿದ್ದಾರೆ.
72 ವಯಸ್ಸಿನ ಖ್ಯಾತ ಗಾಯಕಿ ಶಾರದಾ ಅವನ್ನು ಅನಾರೋಗ್ಯದ ಹಿನ್ನೆಲೆ ದೆಹಲಿಯ ಏಮ್ಸ್ಗೆ ದಾಖಲಿಸಲಾಗಿತ್ತು.
ಅಕ್ಟೋಬರ್.25 ರಿಂದ ಆಸ್ಪತ್ರೆಯ ಆಂಕೊಲಾಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 2017 ರಲ್ಲಿ ಅವರಿಗೆ ಮಲ್ಟಿಪಲ್ ಮೈಲೋಮಾ ರೋಗನಿರ್ಣಯ ದೃಢಪಟ್ಟಿತ್ತು. ಇದು ಮೂಳೆ ಮಜ್ಜೆಯ ಮೇಲೆ ಪರಿಣಾಮ ಬೀರುವ ಒಂದು ರೀತಿಯ ಕ್ಯಾನ್ಸರ್. ಸಿನ್ಹಾ ಅವರನ್ನು ವೆಂಟಿಲೇಟರ್ನಲ್ಲಿರಿಸಲಾಗಿತ್ತು.
‘ಕಾರ್ತಿಕ್ ಮಾಸ್ ಇಜೋ ರಿಯಾ’, ‘ಕೋಯಲ್ ಬಿನ್’ ತರಹದ ಜನಪದ ಗೀತೆಗಳು, ‘ಗ್ಯಾಂಗ್ಸ್ ಆಫ್ ವಸೇಪುರ್’ ಹಿಂದಿ ಸಿನಿಮಾದ ‘ತಾರ್ ಬಿಜಿಲಿ’, ‘ಹಮ್ ಆಪ್ಕೆ ಹೈ ಕೌನ್’ ಚಿತ್ರದ ‘ಬಾಬುಲ್’ ಹಾಡುಗಳ ಗಾಯನದಿಂದ ಶಾರದಾ ಅವರು ಛಾಪು ಮೂಡಿಸಿದ್ದರು. ಶಾರದಾ ಅವರನ್ನು ಅಭಿಮಾನಿಗಳು ‘ಬಿಹಾರಿ ಕೋಕಿಲಾ’ ಎಂದು ಕರೆಯುತ್ತಿದ್ದರು.
ಶಾರದಾ ಅವರು ಭೋಜಪುರಿ, ಮೈಥಿಲಿ ಭಾಷೆಯ ಜನಪದ ಗೀತೆಗಳನ್ನು ಹಾಡುತ್ತಿದ್ದರು. ಶಾರದಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ‘ಪ್ರಸಿದ್ಧ ಜಾನಪದ ಗಾಯಕಿ ಶಾರದಾ ಸಿನ್ಹಾ ಜೀ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಮೈಥಿಲಿ ಮತ್ತು ಭೋಜ್ಪುರಿ ಜಾನಪದ ಹಾಡುಗಳು ಹಲವು ದಶಕಗಳಿಂದ ಜನಪ್ರಿಯವಾಗಿವೆ. ಅವರ ನಿಧನ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ನನ್ನ ಸಂತಾಪಗಳು’ ಎಂದು ಪ್ರಧಾನಿ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…