Featured

ಜನರಲ್ಲಿ ಆತ್ಮವಿಶ್ವಾಸ ತುಂಬಲು ಪೊಲೀಸರಿಗೆ ಹೃದಯವಂತಿಕೆ ಬೇಕೇ ಹೊರತು ಕಠಿಣ ನಿರ್ಧಾರಗಳಲ್ಲ : ಗೃಹ ಸಚಿವ ಅರಗ ಜ್ಞಾನೆಂದ್ರ -Vishwanews24

ಜನರಲ್ಲಿ ಆತ್ಮವಿಶ್ವಾಸ ತುಂಬಲು ಪೊಲೀಸರಿಗೆ ಹೃದಯವಂತಿಕೆ ಬೇಕೇ ಹೊರತು ಕಠಿಣ ನಿರ್ಧಾರಗಳಲ್ಲ : ಗೃಹ ಸಚಿವ ಅರಗ ಜ್ಞಾನೆಂದ್ರ -Vishwanews24

ಮೈಸೂರು: ಜನರಲ್ಲಿ ಆತ್ಮವಿಶ್ವಾಸ ತುಂಬಲು ಪೊಲೀಸರಿಗೆ ಹೃದಯವಂತಿಕೆ ಬೇಕೇ ಹೊರತು ಕಠಿಣ ನಿರ್ಧಾರಗಳಲ್ಲ ಎಂದು ಗೃಹ ಸಚಿವ ಅರಗ ಜ್ಞಾನೆಂದ್ರ ಮಂಗಳವಾರ ತಿಳಿಸಿದರು.

ಪೊಲೀಸ್ ತರಬೇತಿ ಶಾಲೆ ಜ್ಯೋತಿ ನಗರ ಇಲ್ಲಿ 6ನೇ ತಂಡದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಪ್ರಶಿಕ್ಷಣಾರ್ಥಿಗಳ ಆಕರ್ಷಕ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡು ಗೌರವ ವಂದನೆ ಸ್ವೀಕರಿಸಿ, ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.

‘ಮಹಿಳೆ ಅಬಲೆ ಅಂತ ಹೇಳಿದರು, ಯಾಕಾಗಿ ಹೇಳಿದರು ಅಂತ ಈ ಪರೇಡ್ ಸಂದರ್ಭದಲ್ಲಿ ಪ್ರಶ್ನಾರ್ಥಕ ಚಿಹ್ನೆ ನನ್ನಲ್ಲಿ ಮೂಡಿತು. ನಾನು ಅಬಲೆಯಲ್ಲ, ಸಬಲೆ ನನ್ನನ್ನು ನಾನು ರಕ್ಷಣೆ ಮಾಡಿಕೊಂಡು ಸಮಾಜವನ್ನು, ಸಮುದಾಯವನ್ನು ರಕ್ಷಣೆ ಮಾಡುವ ಯೋಗ್ಯತೆ ಪಡೆದಿದ್ದೇನೆಂದು ಎದೆ ತಟ್ಟಿ ಹೇಳುವ ವಾತಾವರಣ ಈ ಪರೇಡ್ ಮೈದಾನದಲ್ಲಿ ಕಂಡು ಬಂತು’ ಎಂದು ಅವರು ಹೇಳಿದರು.

ಇದನ್ನೂ ಓದಿ : ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್‌ಸಿಂಗ್ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಸಿದ್ದಾರೆ : ಪ್ರಧಾನಿ ಗೌರವ ನಮನ -Vishwanews24

‘ವೈರಿ ರಾಷ್ಟ್ರಗಳಿಂದ ಬರುವ ಶತ್ರುಗಳನ್ನು ದಮನ ಮಾಡಲು ನಮ್ಮ ಸೇನಾ ಪಡೆ ಸನ್ನದ್ಧವಾಗಿದೆ. ಆದರೆ ವಿವಿಧ ಧರ್ಮ, ಮತ, ಪಂಥ ಭಾಷೆ ಇವೆಲ್ಲವೂ ಇರುವ ದೇಶದ ಆಂತರಿಕ ರಕ್ಷಣೆಯನ್ನು ಪೊಲೀಸರು ಮಾಡಬೇಕು. ಪೊಲೀಸರು ದೇಶದ ಆಂತರಿಕ ಭದ್ರತೆಯನ್ನು ಗಟ್ಟಿಗೊಳಿಸಿ ನಾಗರಿಕರ ಮಾನ, ಪ್ರಾಣ, ಸ್ವತ್ತು ಕಾಪಾಡುವ ಬಹಳ ದೊಡ್ಡ ಹೊಣೆಗಾರಿಕೆ ನಿರ್ವಹಿಸುತ್ತಿದ್ದಾರೆ’ ಎಂದು ಸಚಿವರು ಶ್ಲಾಘಿಸಿದರು.

‘ಪೊಲೀಸರು ಅಂದ ತಕ್ಷಣ ಪುರುಷರು ಅನ್ನುವ ಪರಿಕಲ್ಪನೆ ನಿರ್ಮಾಣವಾಗುತ್ತಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಸರ್ಕಾರ ಮಹಿಳಾ ಸಿಬ್ಬಂದಿಯನ್ನು ಪೊಲೀಸ್ ಪಡೆಯಲ್ಲಿ ನೇಮಕ ಮಾಡಿಕೊಳ್ಳುವ ಪಾಲಿಸಿ ತಂದಿದೆ. ಶೇ 25 ಪಾಲು ಮಹಿಳೆಯರು ಪೊಲೀಸ್ ಪಡೆಯಲ್ಲಿ ಇರಬೇಕು. ರಾಜ್ಯದಲ್ಲಿ ಶೇ 10ರಷ್ಟು ಮಹಿಳಾ ಪೊಲೀಸ್ ಸಿಬ್ಬಂದಿ ಇದ್ದಾರೆ. ಕ್ರಮೇಣ ಇದನ್ನು ಶೇ 25ಕ್ಕೆ ಹೆಚ್ಚಿಸುವ ಕೆಲಸ ನಡೆಯುತ್ತಿದೆ’ ಎಂದರು.

ಇದನ್ನೂ ಓದಿ :  ಅ.11 ರವರೆಗೆ ರಾಜ್ಯಾದ್ಯಂತ ‘ನೈಟ್ ಕರ್ಪ್ಯೂ’ ವಿಸ್ತರಿಸಿ : ರಾಜ್ಯ ಸರ್ಕಾರ ಆದೇಶ -Vishwanews24

ಜನರ ಮನಸ್ಸಿನಲ್ಲಿ ಪೊಲೀಸ್ ಎಂದರೆ ಭಯ ಇರಬಾರದು. ಸಾಮಾನ್ಯ ಜನರಿಗೆ ಪೊಲೀಸ್ ಎಂದರೆ ನಮ್ಮ ರಕ್ಷಕರು ಸ್ನೇಹಿತರು ಎನ್ನುವ ಭಾವನೆ ಇರಬೇಕು. ಅಪರಾಧಿಗಳಿಗೆ, ದರೋಡೆಕೋರರಿಗೆ, ಕಳ್ಳರಿಗೆ ಭಯ ಇರಬೇಕೇ ಹೊರತು ಸಾಮಾನ್ಯರಿಗಲ್ಲ. ಠಾಣೆಗೆ ಬಂದ ಸಾಮಾನ್ಯ ಜನರನ್ನು ಗೌರವಿಸಬೇಕು. ಸಾಮಾನ್ಯ ನಾಗರಿಕ ಸ್ನೇಹಿಯಾಗಿ ನಡೆದುಕೊಳ್ಳಬೇಕು. ಸಾಮಾನ್ಯರಿಂದ ಇಂತಹ ಅಪೇಕ್ಷೆ ಇದೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ  : ಸುರತ್ಕಲ್: ಒಟ್ಟಿಗೆ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಿಂದೂ ಕಾರ್ಯಕರ್ತರಿಂದ ಹಲ್ಲೆ ;  ಐವರ ಬಂಧನ -Vishwanews24

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

13 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

14 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

14 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

15 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

15 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

15 hours ago