Featured

ಜನರಲ್ಲಿ ಭರವಸೆ ಮೂಡಿಸಲು ವ್ಯಾಕ್ಸಿನ್ ಹಾಕಿಸ್ಕೊಂಡ ಉಡುಪಿ‌ ಡಿಸಿ-vishwanews24

ಜನರಲ್ಲಿ ಭರವಸೆ ಮೂಡಿಸಲು ವ್ಯಾಕ್ಸಿನ್ ಹಾಕಿಸ್ಕೊಂಡ ಉಡುಪಿ‌ ಡಿಸಿ

ಉಡುಪಿ: ಕೊರೋನಾ ಸಾಂಕ್ರಾಮಿಕ ವಿರುದ್ಧ ಹೋರಾಡಿದ ಫ್ರಂಟ್ ಲೈನ್ ವರ್ಕರ್ಸ್ ಗೆ ಉಡುಪಿ ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್ ಆರಂಭವಾಗಿದೆ. ಜಿಲ್ಲಾಧಿಕಾರಿ ಜಿ. ಜಗದೀಶ್ ಕೋವಿಶೀಲ್ಡ್ ಇಂಜೆಕ್ಷನ್ ಚುಚ್ಚಿಸಿಕೊಂಡರು. ಅಜ್ಜರಕಾಡು ಜಿಲ್ಲಾವಸರಕಾರಿ ಆಸ್ಪತ್ರೆಯ ವ್ಯಾಕ್ಸಿನೇಶನ್ ಕೊಠಡಿಯಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಯ್ತು. ಜಿಲ್ಲಾಧಿಕಾರಿಗಳ ಜೊತೆ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಎ ಎಸ್ ಪಿ ಕುಮಾರ ಚಂದ್ರ, ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ನಗರಸಭೆ ಕಮಿಷನರ್ ಉದಯಕುಮಾರ್ ಶೆಟ್ಟಿ ,ಕೂಡಾ ಲಸಿಕೆ ಹಾಕಿಸಿಕೊಂಡರು.

ತಾಲೂಕಿನಲ್ಲಿ ತಾಸಿಲ್ದಾರರು, ಇಒಗಳು ವ್ಯಾಕ್ಸಿನೇಷನ್ ಪಡೆದುಕೊಳ್ಳಲಿದ್ದಾರೆ. ಮೂರು ದಿನದಲ್ಲಿ 4040 ಜನರಿಗೆ ಲಸಿಕೆ ಹಾಕಲಾಗುತ್ತದೆ. ಮೊದಲ ದಿನ 593 ಜನಕ್ಕೆ ಲಸಿಕೆ ಹಾಕಲಾಗುತ್ತದೆ. ನಾವು ಮೊದಲು ತೆಗೆದುಕೊಂಡು ಕೊರೋನಾ ರಿಸ್ಕ್ ಕಡಿಮೆ ಮಾಡಬೇಕು. ಅಧಿಕಾರಿ ವರ್ಗ ಆರೋಗ್ಯವಾಗಿದ್ದು ರೋಗದ ವಿರುದ್ಧದ ಹೋರಾಟಕ್ಕೆ ಸಿದ್ಧವಾಗಿರಬೇಕು ಎಂಬ ಹಿನ್ನೆಲೆಯಲ್ಲಿ ನಾವೇ ಲಸಿಕೆ ಹಾಕಿಸಿಕೊಂಡಿದ್ದೇವೆ. ಇಂಜೆಕ್ಷನ್ ತೆಗೆದಕೊಂಡ ಮೇಲೆ ಯಾವುದೇ ವ್ಯತ್ಯಾಸ ಆಗಿಲ್ಲ. ಯಾರೂ ಲಸಿಕೆ ಪಡೆಯಲು ಹಿಂಜರಿಯೋದು ಬೇಡ. ಕೊರೋನಾದ ರಿಸ್ಕ್ ಗೆ ಹೋಲಿಸಿದ್ರೆ ಪಾಯಿಂಟ್ 1 % ರಿಸ್ಕ್ ಇಲ್ಲ ಎಂದು ಡಿಸಿ ಜಿ. ಜಗದೀಶ್ ಹೇಳಿದರು.

ಕೊರೋನಾ ಬಂದವರಿಗೆ , ಅವರ ಕುಟುಂಬಕ್ಕೆ ಲಸಿಕೆಯ ಬೆಲೆ ಗೊತ್ತಿರುತ್ತದೆ. ಕೋರೋನಾ ನಿವಾರಣೆಯಾಗಿದೆ ಎಂಬ ಮನೋಭಾವನೆಯಲ್ಲಿ ಜನ ಇದ್ದಾರೆ. ಆದರೆ ಕೊರೋನ ರೂಪಾಂತರ ಆಗುವ ಸಾಧ್ಯತೆ. ಇದೇ ಎಚ್ಚರಿಕೆ ಗೋಸ್ಕರ ಲಸಿಕೆಯನ್ನು ಪಡೆದುಕೊಳ್ಳಲೇಬೇಕು. ಸರ್ಕಾರದಿಂದ ಉಚಿತ ಲಸಿಕೆ ಸಿಕ್ಕಿರುವುದು ನಮ್ಮ ಅದೃಷ್ಟ ಎಂದು ಸಿಇಒ ಡಾ. ನವೀನ್ ಭಟ್ ಹೇಳಿದರು.

ಕೊರೊನಾ ಲಸಿಕೆ ತೆಗೆದುಕೊಳ್ಳಲು ಯಾರು ಹಿಂಜರಿಯುವ ಅವಶ್ಯಕತೆ ಇಲ್ಲ. ಕೊರೋನಾ ಸಾಂಕ್ರಾಮಿಕ ದ ವಿರುದ್ಧ ಹೋರಾಡುವ ಫ್ರಂಟ್ ಲೈನ್ ವರ್ಕರ್ಸ್ ಎಲ್ಲರೂ ಆತಂಕವಿಲ್ಲದೆ ಲಸಿಕೆ ತೆಗೆದುಕೊಳ್ಳಿ ಎಂದು ಎಎಸ್ ಪಿ ಕುಮಾರ ಚಂದ್ರ ಕರೆಕೊಟ್ಟರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago