ಉಡುಪಿ: ಕೊರೋನಾ ಸಾಂಕ್ರಾಮಿಕ ವಿರುದ್ಧ ಹೋರಾಡಿದ ಫ್ರಂಟ್ ಲೈನ್ ವರ್ಕರ್ಸ್ ಗೆ ಉಡುಪಿ ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್ ಆರಂಭವಾಗಿದೆ. ಜಿಲ್ಲಾಧಿಕಾರಿ ಜಿ. ಜಗದೀಶ್ ಕೋವಿಶೀಲ್ಡ್ ಇಂಜೆಕ್ಷನ್ ಚುಚ್ಚಿಸಿಕೊಂಡರು. ಅಜ್ಜರಕಾಡು ಜಿಲ್ಲಾವಸರಕಾರಿ ಆಸ್ಪತ್ರೆಯ ವ್ಯಾಕ್ಸಿನೇಶನ್ ಕೊಠಡಿಯಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಯ್ತು. ಜಿಲ್ಲಾಧಿಕಾರಿಗಳ ಜೊತೆ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಎ ಎಸ್ ಪಿ ಕುಮಾರ ಚಂದ್ರ, ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ನಗರಸಭೆ ಕಮಿಷನರ್ ಉದಯಕುಮಾರ್ ಶೆಟ್ಟಿ ,ಕೂಡಾ ಲಸಿಕೆ ಹಾಕಿಸಿಕೊಂಡರು.
ತಾಲೂಕಿನಲ್ಲಿ ತಾಸಿಲ್ದಾರರು, ಇಒಗಳು ವ್ಯಾಕ್ಸಿನೇಷನ್ ಪಡೆದುಕೊಳ್ಳಲಿದ್ದಾರೆ. ಮೂರು ದಿನದಲ್ಲಿ 4040 ಜನರಿಗೆ ಲಸಿಕೆ ಹಾಕಲಾಗುತ್ತದೆ. ಮೊದಲ ದಿನ 593 ಜನಕ್ಕೆ ಲಸಿಕೆ ಹಾಕಲಾಗುತ್ತದೆ. ನಾವು ಮೊದಲು ತೆಗೆದುಕೊಂಡು ಕೊರೋನಾ ರಿಸ್ಕ್ ಕಡಿಮೆ ಮಾಡಬೇಕು. ಅಧಿಕಾರಿ ವರ್ಗ ಆರೋಗ್ಯವಾಗಿದ್ದು ರೋಗದ ವಿರುದ್ಧದ ಹೋರಾಟಕ್ಕೆ ಸಿದ್ಧವಾಗಿರಬೇಕು ಎಂಬ ಹಿನ್ನೆಲೆಯಲ್ಲಿ ನಾವೇ ಲಸಿಕೆ ಹಾಕಿಸಿಕೊಂಡಿದ್ದೇವೆ. ಇಂಜೆಕ್ಷನ್ ತೆಗೆದಕೊಂಡ ಮೇಲೆ ಯಾವುದೇ ವ್ಯತ್ಯಾಸ ಆಗಿಲ್ಲ. ಯಾರೂ ಲಸಿಕೆ ಪಡೆಯಲು ಹಿಂಜರಿಯೋದು ಬೇಡ. ಕೊರೋನಾದ ರಿಸ್ಕ್ ಗೆ ಹೋಲಿಸಿದ್ರೆ ಪಾಯಿಂಟ್ 1 % ರಿಸ್ಕ್ ಇಲ್ಲ ಎಂದು ಡಿಸಿ ಜಿ. ಜಗದೀಶ್ ಹೇಳಿದರು.
ಕೊರೋನಾ ಬಂದವರಿಗೆ , ಅವರ ಕುಟುಂಬಕ್ಕೆ ಲಸಿಕೆಯ ಬೆಲೆ ಗೊತ್ತಿರುತ್ತದೆ. ಕೋರೋನಾ ನಿವಾರಣೆಯಾಗಿದೆ ಎಂಬ ಮನೋಭಾವನೆಯಲ್ಲಿ ಜನ ಇದ್ದಾರೆ. ಆದರೆ ಕೊರೋನ ರೂಪಾಂತರ ಆಗುವ ಸಾಧ್ಯತೆ. ಇದೇ ಎಚ್ಚರಿಕೆ ಗೋಸ್ಕರ ಲಸಿಕೆಯನ್ನು ಪಡೆದುಕೊಳ್ಳಲೇಬೇಕು. ಸರ್ಕಾರದಿಂದ ಉಚಿತ ಲಸಿಕೆ ಸಿಕ್ಕಿರುವುದು ನಮ್ಮ ಅದೃಷ್ಟ ಎಂದು ಸಿಇಒ ಡಾ. ನವೀನ್ ಭಟ್ ಹೇಳಿದರು.
ಕೊರೊನಾ ಲಸಿಕೆ ತೆಗೆದುಕೊಳ್ಳಲು ಯಾರು ಹಿಂಜರಿಯುವ ಅವಶ್ಯಕತೆ ಇಲ್ಲ. ಕೊರೋನಾ ಸಾಂಕ್ರಾಮಿಕ ದ ವಿರುದ್ಧ ಹೋರಾಡುವ ಫ್ರಂಟ್ ಲೈನ್ ವರ್ಕರ್ಸ್ ಎಲ್ಲರೂ ಆತಂಕವಿಲ್ಲದೆ ಲಸಿಕೆ ತೆಗೆದುಕೊಳ್ಳಿ ಎಂದು ಎಎಸ್ ಪಿ ಕುಮಾರ ಚಂದ್ರ ಕರೆಕೊಟ್ಟರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…