Featured

ಜನರಲ್ಲಿ ಭರವಸೆ ಮೂಡಿಸಲು ವ್ಯಾಕ್ಸಿನ್ ಹಾಕಿಸ್ಕೊಂಡ ಉಡುಪಿ‌ ಡಿಸಿ-vishwanews24

ಜನರಲ್ಲಿ ಭರವಸೆ ಮೂಡಿಸಲು ವ್ಯಾಕ್ಸಿನ್ ಹಾಕಿಸ್ಕೊಂಡ ಉಡುಪಿ‌ ಡಿಸಿ

ಉಡುಪಿ: ಕೊರೋನಾ ಸಾಂಕ್ರಾಮಿಕ ವಿರುದ್ಧ ಹೋರಾಡಿದ ಫ್ರಂಟ್ ಲೈನ್ ವರ್ಕರ್ಸ್ ಗೆ ಉಡುಪಿ ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್ ಆರಂಭವಾಗಿದೆ. ಜಿಲ್ಲಾಧಿಕಾರಿ ಜಿ. ಜಗದೀಶ್ ಕೋವಿಶೀಲ್ಡ್ ಇಂಜೆಕ್ಷನ್ ಚುಚ್ಚಿಸಿಕೊಂಡರು. ಅಜ್ಜರಕಾಡು ಜಿಲ್ಲಾವಸರಕಾರಿ ಆಸ್ಪತ್ರೆಯ ವ್ಯಾಕ್ಸಿನೇಶನ್ ಕೊಠಡಿಯಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಯ್ತು. ಜಿಲ್ಲಾಧಿಕಾರಿಗಳ ಜೊತೆ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಎ ಎಸ್ ಪಿ ಕುಮಾರ ಚಂದ್ರ, ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ನಗರಸಭೆ ಕಮಿಷನರ್ ಉದಯಕುಮಾರ್ ಶೆಟ್ಟಿ ,ಕೂಡಾ ಲಸಿಕೆ ಹಾಕಿಸಿಕೊಂಡರು.

ತಾಲೂಕಿನಲ್ಲಿ ತಾಸಿಲ್ದಾರರು, ಇಒಗಳು ವ್ಯಾಕ್ಸಿನೇಷನ್ ಪಡೆದುಕೊಳ್ಳಲಿದ್ದಾರೆ. ಮೂರು ದಿನದಲ್ಲಿ 4040 ಜನರಿಗೆ ಲಸಿಕೆ ಹಾಕಲಾಗುತ್ತದೆ. ಮೊದಲ ದಿನ 593 ಜನಕ್ಕೆ ಲಸಿಕೆ ಹಾಕಲಾಗುತ್ತದೆ. ನಾವು ಮೊದಲು ತೆಗೆದುಕೊಂಡು ಕೊರೋನಾ ರಿಸ್ಕ್ ಕಡಿಮೆ ಮಾಡಬೇಕು. ಅಧಿಕಾರಿ ವರ್ಗ ಆರೋಗ್ಯವಾಗಿದ್ದು ರೋಗದ ವಿರುದ್ಧದ ಹೋರಾಟಕ್ಕೆ ಸಿದ್ಧವಾಗಿರಬೇಕು ಎಂಬ ಹಿನ್ನೆಲೆಯಲ್ಲಿ ನಾವೇ ಲಸಿಕೆ ಹಾಕಿಸಿಕೊಂಡಿದ್ದೇವೆ. ಇಂಜೆಕ್ಷನ್ ತೆಗೆದಕೊಂಡ ಮೇಲೆ ಯಾವುದೇ ವ್ಯತ್ಯಾಸ ಆಗಿಲ್ಲ. ಯಾರೂ ಲಸಿಕೆ ಪಡೆಯಲು ಹಿಂಜರಿಯೋದು ಬೇಡ. ಕೊರೋನಾದ ರಿಸ್ಕ್ ಗೆ ಹೋಲಿಸಿದ್ರೆ ಪಾಯಿಂಟ್ 1 % ರಿಸ್ಕ್ ಇಲ್ಲ ಎಂದು ಡಿಸಿ ಜಿ. ಜಗದೀಶ್ ಹೇಳಿದರು.

ಕೊರೋನಾ ಬಂದವರಿಗೆ , ಅವರ ಕುಟುಂಬಕ್ಕೆ ಲಸಿಕೆಯ ಬೆಲೆ ಗೊತ್ತಿರುತ್ತದೆ. ಕೋರೋನಾ ನಿವಾರಣೆಯಾಗಿದೆ ಎಂಬ ಮನೋಭಾವನೆಯಲ್ಲಿ ಜನ ಇದ್ದಾರೆ. ಆದರೆ ಕೊರೋನ ರೂಪಾಂತರ ಆಗುವ ಸಾಧ್ಯತೆ. ಇದೇ ಎಚ್ಚರಿಕೆ ಗೋಸ್ಕರ ಲಸಿಕೆಯನ್ನು ಪಡೆದುಕೊಳ್ಳಲೇಬೇಕು. ಸರ್ಕಾರದಿಂದ ಉಚಿತ ಲಸಿಕೆ ಸಿಕ್ಕಿರುವುದು ನಮ್ಮ ಅದೃಷ್ಟ ಎಂದು ಸಿಇಒ ಡಾ. ನವೀನ್ ಭಟ್ ಹೇಳಿದರು.

ಕೊರೊನಾ ಲಸಿಕೆ ತೆಗೆದುಕೊಳ್ಳಲು ಯಾರು ಹಿಂಜರಿಯುವ ಅವಶ್ಯಕತೆ ಇಲ್ಲ. ಕೊರೋನಾ ಸಾಂಕ್ರಾಮಿಕ ದ ವಿರುದ್ಧ ಹೋರಾಡುವ ಫ್ರಂಟ್ ಲೈನ್ ವರ್ಕರ್ಸ್ ಎಲ್ಲರೂ ಆತಂಕವಿಲ್ಲದೆ ಲಸಿಕೆ ತೆಗೆದುಕೊಳ್ಳಿ ಎಂದು ಎಎಸ್ ಪಿ ಕುಮಾರ ಚಂದ್ರ ಕರೆಕೊಟ್ಟರು.

Vishwa News 24

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

12 hours ago

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…

12 hours ago

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…

12 hours ago

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…

12 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

13 hours ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

14 hours ago