ಜೈಪುರ: ಡಿಸೆಂಬರ್ 8 ರಂದು ಹೆಲಿಕಾಪ್ಟರ್ ದುರಂತದಲ್ಲಿ ರಕ್ಷಣಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಅಗಲಿಕೆಯಿಂದ ಇಡೀ ದೇಶವೇ ಶೋಕತಪ್ತವಾಗಿರುವ ಸಂದರ್ಭದಲ್ಲಿ ಕಿಡಿಗೇಡಿಯೊಬ್ಬ ಸಾಮಾಜಿಕ ಮಾಧ್ಯಮದಲ್ಲಿ ಅವರ ಸಾವಿನ ಸಂಭ್ರಮಾಚರಣೆಯನ್ನು ನಡೆಸಿ ಇಡೀ ದೇಶದ ಕೆಂಗಣ್ಣಿಗೆ ಗುರಿಯಾಗಿದ್ದಾನೆ.
ರಾಜಸ್ಥಾನ ಮೂಲದ ಜವ್ವಾದ್ ಖಾನ್ ಸಾಮಾಜಿಕ ಮಾಧ್ಯಮದಲ್ಲಿ ಜನರಲ್ ರಾವತ್ ಅವರ ಚಿತ್ರವನ್ನು ಹಂಚಿಕೊಂಡಿದ್ದನು. ಇದರೊಂದಿಗೆ ಜಹನ್ನೂಮ್ ಮುಟ್ಟುವ ಮೊದಲೇ ಜೀವಂತವಾಗಿ ಸುಟ್ಟುಹೋದರು ಎಂಬ ಅವಹೇಳನಕಾರಿ ಸಾಲನ್ನೂ ಬರೆದು ಹಾಕಿದ್ದ. ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆಗುತ್ತಿದ್ದಂತೆ ರಾಜಸ್ಥಾನದ ಟೋಂಕ್ ಪೊಲೀಸರು ಆರೋಪಿ ಜವ್ವಾದ್ ಖಾನ್ನನ್ನು ಬಂಧಿಸಿದ್ದಾರೆ.
ಇದರ ಬಳಿಕ ಟ್ವಿಟ್ಟರ್ನಲ್ಲಿ ಟೋಂಕ್ ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ. ಅವಹೇಳನಕಾರಿ ಹೇಳಿಕೆಯ ಮೇಲೆ ಅಬ್ದುಲ್ ನಕ್ಕಿ ಖಾನ್ರ ಮಗ ಜವ್ವಾದ್ ಖಾನ್ನನ್ನು ಬಂಧಿಸಲಾಗಿದೆ. 21 ವಯಸ್ಸಿನ ಜವ್ವಾದ್ ಖಾನ್ ರಾಜ್ ಟಾಕೀಸ್ ಬಳಿಯ ನಿವಾಸಿಯಾಗಿದ್ದಾನೆ. ಡಿಸೆಂಬರ್ 8ರಂದು ಅವಹೇಳನಕಾರಿ ಹೇಳಿಕೆಯನ್ನು ನೀಡಿರುವ ವಿಚಾರ ನಮ್ಮ ಗಮನಕ್ಕೆ ಬಂದಿರುವುದರಿಂದ ಆರೋಪಿಯನ್ನು ಬಂಧಿಸಲು ನಾಲ್ಕು ವಿಶೇಷ ತಂಡಗಳ ರಚನೆ ಮಾಡಲಾಗಿತ್ತು. ಅವನನ್ನು ಸದ್ಯ ಬಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…