Featured

ಜನರಿಕ್ ಔಷಧಿಗಳು ಇನ್ನು ಎಲ್ಲೆಡೆ ಲಭ್ಯ ; ಕೇಂದ್ರದ ಮಹತ್ವದ ನಿರ್ಧಾರ..

ರಾಷ್ಟ್ರದಲ್ಲಿ ಮತ್ತೊಂದು ಅಮೂಲಾಗ್ರ ಬದಲಾವಣೆಗೆ ವೇದಿಕೆ ಸಿದ್ಧವಾಗಿದೆ. ಮೋದಿ ಸರ್ಕಾರದ ಮತ್ತೊಂದು ಮಹತ್ವದ ನಿರ್ಧಾರ ಭಾರತದ ಬಡವರ ಪಾಲಿಗೆ ನಿಜಕ್ಕೂ ಅಚ್ಛೇ ದಿನಗಳನ್ನು ತರಲಿದೆ. ಭಾರತೀಯರನ್ನು ಆರೋಗ್ಯವಂತರನ್ನಾಗಿಡುವ ಉದ್ದೇಶದಿಂದ, ಮಿತಿಮೀರುತ್ತಿದ್ದ ಔಷಧ ಬೆಲೆಗಳಿಗೆ ಕಡಿವಾಣ ಹಾಕಲು ಮೋದಿ ಸರಕಾರ ಜನರಿಕ್ ಜನೌಷಧಿ ಕೇಂದ್ರಗಳನ್ನು ದೇಶದಾದ್ಯಂತ ತೆರೆದಿತ್ತು.

ಈ ಜನರಿಕ್ ಜನೌಷಧಿ ಕೇಂದ್ರಗಳು ಔಷಧಿಗಳಿಗೆ ಹಣ ಹೊಂದಿಸುವುದು ಹೇಗೆ ಎನ್ನುವ ಚಿಂತೆಯಲ್ಲಿದ್ದ ಬಡವರಿಗೆ ಅನುಕೂಲವಾಗಿದೆ. ಬ್ರಾಂಡೆಡ್ ಹಾಗೂ ಹಾಗೂ ಜೆನೆರಿಕ್ ಔಷಧಿಗಳ ಗುಣಮಟ್ಟ ಒಂದೇ ಆಗಿದ್ದು ಈ ಜೆನೆರಿಕ್ ಔಷಧಿಗಳು ಉತ್ಪಾದನೆಯಾಗಿ ನೇರವಾಗಿ ಮಳಿಗೆಗಳಿಗೆ ಬರುವುದರಿಂದ ಜನರಿಗೆ ಬ್ರಾಂಡೆಡ್ ಔಷಧಿಗಳಿಗಿಂತ ಸುಮಾರು 30 ರಿಂದ 70 ಶೇಕಡಾ ದಷ್ಟು ಕಡಿಮೆ ದರದಲ್ಲಿ ಲಭ್ಯವಾಗುತ್ತಿದೆ. ಈ ಕೇಂದ್ರದಲ್ಲಿ ಡಯಾಲಿಸಿಸ್ ರೋಗಿಗೆ ನೀಡಲಾಗುವ ಇಂಜೆಕ್ಷನ್ ನ ಬೆಲೆ ಕೇವಲ 650, ಇದೇ ಇಂಜೆಕ್ಷನ್ ನ ಬೆಲೆ ಮೆಡಿಕಲ್ ಗಳಲ್ಲಿ 1800 ರೂಪಾಯಿಗಳಾಗಿದ್ದು, ಎಚ್.ಐ.ವಿ. ಔಷಧ ಕಿಟ್ ಗೆ ಇತರೆಡೆ 4000 ರೂಪಾಯಿ ಮೌಲ್ಯವಾದರೆ ಜನರಿಕ್ ಮಳಿಗೆಗಳಲ್ಲಿ ಇದು 650 ರೂಪಾಯಿಗೆ ಲಭ್ಯವಿದೆ.

ದೇಶದಾದ್ಯಂತ 4000 ಕ್ಕೂ ಹೆಚ್ಚು ಜನೌಷಾದಿ ಮಳಿಗೆಗಳಿದ್ದರೂ ಸಹ ಜನರಿಗೆ ಸರಿಯಾಗಿ ತಲುಪುತ್ತಿರಲಿಲ್ಲ. ಈಗ ಇದಕ್ಕೆಲ್ಲಾ ಅಂತ್ಯ ಆಡಲು ಮೋದಿ ಸರಕಾರ ಕ್ರಾಂತಿಕಾರಿ ನಿರ್ಧಾರವನ್ನು ಕೈಗೊಂಡಿದೆ. ಇನ್ನು ಜನರಿಕ್ ಔಷಧಿಗಳನ್ನು ದೇಶದ ಎಲ್ಲಾ ಮೆಡಿಕಲ್ ಶಾಪ್ ಗಳಲ್ಲಿ ಮಾರಾಟ ಮಾಡುವಂತೆ ಸೂಚಿಸಲಾಗಿದ್ದು, ಜನರಿಕ್ ಔಷಧಿಗಳನ್ನು ತಮ್ಮ ಮೆಡಿಕಲ್ ಶಾಪ್ ನಲ್ಲಿ ಎಲ್ಲರಿಗೂ ಕಾಣುವಂತೆ ಇಡಬೇಕು ಎಂದು ಕೇಂದ್ರ ಔಷಧ ನಿಯಂತ್ರಣಾಲಯ ಮಹತ್ವದ ಫರ್ಮಾನು ಹೊರಡಿಸಿದೆ.ಪ್ರತಿಯೊಬ್ಬ ಭಾರತೀಯನಿಗೆ ಸಹ ಜನರಿಕ್ ಔಷಧಗಳು ಲಭ್ಯವಾಗಬೇಕು ಎನ್ನುವ ಉದ್ದೇಶದಿಂದ ಜನರಿಕ್ ಔಷಧಗಳನ್ನು ಎಲ್ಲ ಮೆಡಿಕಲ್ ಸ್ಟೋರ್ ಗಳಲ್ಲಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ .

ಜೂನ್ ಹನ್ನೆರಡು ರಂದು ಕೇಂದ್ರ ಔಷಧ ನಿಯಂತ್ರಣ ಇಲಾಖೆ ಹೊರಡಿಸಿರುವ ಈ ಆದೇಶದಲ್ಲಿ ಲೈಸೆನ್ಸ್ ಪಡೆದು ಸೇವೆ ನೀಡುತ್ತಿರುವ ಎಲ್ಲಾ ಔಷಧಿ ಅಂಗಡಿಗಳಲ್ಲಿ ಜನರಿಕ್ ಔಷಧ ಮಾರಾಟ ಮಾಡುವಂತೆ ಸೂಚಿಸಲಾಗಿದೆ. ಒಂದು ವೇಳೆ ಮೆಡಿಕಲ್ ಗಳಲ್ಲಿ ಜನರಿಕ್ ಔಷಧ ಸಂಗ್ರಹಣೆ ಮತ್ತು ಮಾರಾಟದ ಆದೇಶ ಪಾಲನೆ ಉಲ್ಲಂಘಿಸಿದಲ್ಲಿ ಅಂತಹ ಔಷಧ ಅಂಗಡಿಗಳ ಲೈಸೆನ್ಸ್ ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಸೂಚನೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

5 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

6 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

7 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

7 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

7 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

8 hours ago