Featured

ಜನರಿಗೆ ಬಿಜೆಪಿಯವರ ಮೋಸದ ಅರಿವಾದಾಗ ಖಂಡಿತಾ ಅಧಿಕಾರದಿಂದ ಕಿತ್ತೊಗೆಯುತ್ತಾರೆ : ವಿನಯಕುಮಾರ್ ಸೊರಕೆ -Vishwanews24

ಉದ್ಯಾವರ: ಬಿಜೆಪಿಯವರು ಅಪಪ್ರಚಾರ ಮಾಡಿ ಜನತೆಯ ಮಾನಸಿಕತೆಯನ್ನು ಭಾವನಾತ್ಮಕವಾಗಿ ಭ್ರಷ್ಟಗೊಳಿಸಿ ಅಧಿಕಾರವನ್ನು ಹಿಡಿದಿರಬಹುದು. ಇದು ಏನೂ ಶಾಶ್ವತವಲ್ಲ. ಜನರಿಗೆ ಇವರ ಮೋಸದ ಅರಿವಾದಾಗ ಖಂಡಿತಾ ಅಧಿಕಾರದಿಂದ ಕಿತ್ತೊಗೆಯುತ್ತಾರೆ ಎಂದು ಮಾಜಿ ಸಚಿವರಾದ ಶ್ರೀ ವಿನಯಕುಮಾರ್ ಸೊರಕೆಯವರು ಹೇಳಿದರು.

ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ಮಾತನಾಡಿದ ಅವರು, ನಮ್ಮ ಅಭಿವೃದ್ಧಿ ಮತ್ತು ಜನಪರ ಕೆಲಸಗಳನ್ನು ಎದುರಿಸಲಾಗದೇ ಬಿಜೆಪಿಯವರು ಧರ್ಮ, ಗಡಿ, ಸೈನ್ಯ ಮೊದಲಾದ ಭಾವನಾತ್ಮಕ ಸಂಗತಿಗಳನ್ನು ಮುನ್ನಲೆಗೆ ತಂದು ಅಪಪ್ರಚಾರ ಮಾಡಿ ಜನತೆಯ ಮಾನಸಿಕತೆಯನ್ನು ಭಾವನಾತ್ಮಕವಾಗಿ ಭ್ರಷ್ಟಗೊಳಿಸಿ ಅಧಿಕಾರವನ್ನು ಹಿಡಿದಿರಬಹುದು. ಇದು ಏನೂ ಶಾಶ್ವತವಲ್ಲ. ಜನರಿಗೆ ಇವರ ಮೋಸದ ಅರಿವಾದಾಗ ಖಂಡಿತಾ ಅಧಿಕಾರದಿಂದ ಕಿತ್ತೊಗೆಯುತ್ತಾರೆ ಎಂದರು.

ಸೋತ ಕಾಂಗ್ರೆಸ್ ಪಕ್ಷ ಫಿನಿಕ್ಸ್ ನಂತೆ ಎದ್ದು ಬಂದ ಇತಿಹಾಸ ನಮ್ಮ ಮುಂದೆ ಇದೆ. ಹಾಗಾಗಿ ಕಾರ್ಯಕರ್ತರು ದೃತಿಗೆಡಬೇಕಾಗಿಲ್ಲ, ನಾವೆಲ್ಲಾ ಒಗ್ಗಟ್ಟಾಗಿ ತಳಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ಪಾಲ್ಗೊಳೋಣ ಎಂದು  ಹೇಳಿದರು.

ದೇಶದ ಆರ್ಥಿಕ ಸ್ಥಿತಿ ಕಂಡು ಕೇಳರಿಯದ ರೀತಿಯಲ್ಲಿ ಕುಸಿಯುತ್ತಿದೆ. ನಿರುದ್ಯೋಗ ತಾಂಡವ ಆಡುತ್ತಿದೆ. ಬಿಜೆಪಿಯ ಈ ರೀತಿ ಜನತೆಯನ್ನು ದಾರಿ ತಪ್ಪಿಸುವ ಕೆಲಸವನ್ನು ವಿಫಲಗೊಳಿಸಲು ನಮ್ಮ ಕಾರ್ಯಕರ್ತರು ಸಜ್ಜಾಗಬೇಕಾಗಿದೆ ಎಂದು ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಶ್ರೀ ಉದ್ಯಾವರ ನಾಗೇಶ್ ಕುಮಾರ್‍ ನುಡಿದರು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಗಿರೀಶ್ ಕುಮಾರ್ ವಹಿಸಿದ್ದರು. ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಗಂಧಿ ಶೇಖರ್ ಉಪಸ್ಥಿತರಿದ್ದರು. ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಗಳಾದ ಶ್ರೀ ಆಬಿದ್ ಆಲಿಯವರು ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರ್ವಹಿಸಿದರು

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

13 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

13 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

13 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

13 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

16 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

16 hours ago