Featured

ಜನರಿಗೆ ಬಿಜೆಪಿಯವರ ಮೋಸದ ಅರಿವಾದಾಗ ಖಂಡಿತಾ ಅಧಿಕಾರದಿಂದ ಕಿತ್ತೊಗೆಯುತ್ತಾರೆ : ವಿನಯಕುಮಾರ್ ಸೊರಕೆ -Vishwanews24

ಉದ್ಯಾವರ: ಬಿಜೆಪಿಯವರು ಅಪಪ್ರಚಾರ ಮಾಡಿ ಜನತೆಯ ಮಾನಸಿಕತೆಯನ್ನು ಭಾವನಾತ್ಮಕವಾಗಿ ಭ್ರಷ್ಟಗೊಳಿಸಿ ಅಧಿಕಾರವನ್ನು ಹಿಡಿದಿರಬಹುದು. ಇದು ಏನೂ ಶಾಶ್ವತವಲ್ಲ. ಜನರಿಗೆ ಇವರ ಮೋಸದ ಅರಿವಾದಾಗ ಖಂಡಿತಾ ಅಧಿಕಾರದಿಂದ ಕಿತ್ತೊಗೆಯುತ್ತಾರೆ ಎಂದು ಮಾಜಿ ಸಚಿವರಾದ ಶ್ರೀ ವಿನಯಕುಮಾರ್ ಸೊರಕೆಯವರು ಹೇಳಿದರು.

ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ಮಾತನಾಡಿದ ಅವರು, ನಮ್ಮ ಅಭಿವೃದ್ಧಿ ಮತ್ತು ಜನಪರ ಕೆಲಸಗಳನ್ನು ಎದುರಿಸಲಾಗದೇ ಬಿಜೆಪಿಯವರು ಧರ್ಮ, ಗಡಿ, ಸೈನ್ಯ ಮೊದಲಾದ ಭಾವನಾತ್ಮಕ ಸಂಗತಿಗಳನ್ನು ಮುನ್ನಲೆಗೆ ತಂದು ಅಪಪ್ರಚಾರ ಮಾಡಿ ಜನತೆಯ ಮಾನಸಿಕತೆಯನ್ನು ಭಾವನಾತ್ಮಕವಾಗಿ ಭ್ರಷ್ಟಗೊಳಿಸಿ ಅಧಿಕಾರವನ್ನು ಹಿಡಿದಿರಬಹುದು. ಇದು ಏನೂ ಶಾಶ್ವತವಲ್ಲ. ಜನರಿಗೆ ಇವರ ಮೋಸದ ಅರಿವಾದಾಗ ಖಂಡಿತಾ ಅಧಿಕಾರದಿಂದ ಕಿತ್ತೊಗೆಯುತ್ತಾರೆ ಎಂದರು.

ಸೋತ ಕಾಂಗ್ರೆಸ್ ಪಕ್ಷ ಫಿನಿಕ್ಸ್ ನಂತೆ ಎದ್ದು ಬಂದ ಇತಿಹಾಸ ನಮ್ಮ ಮುಂದೆ ಇದೆ. ಹಾಗಾಗಿ ಕಾರ್ಯಕರ್ತರು ದೃತಿಗೆಡಬೇಕಾಗಿಲ್ಲ, ನಾವೆಲ್ಲಾ ಒಗ್ಗಟ್ಟಾಗಿ ತಳಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ಪಾಲ್ಗೊಳೋಣ ಎಂದು  ಹೇಳಿದರು.

ದೇಶದ ಆರ್ಥಿಕ ಸ್ಥಿತಿ ಕಂಡು ಕೇಳರಿಯದ ರೀತಿಯಲ್ಲಿ ಕುಸಿಯುತ್ತಿದೆ. ನಿರುದ್ಯೋಗ ತಾಂಡವ ಆಡುತ್ತಿದೆ. ಬಿಜೆಪಿಯ ಈ ರೀತಿ ಜನತೆಯನ್ನು ದಾರಿ ತಪ್ಪಿಸುವ ಕೆಲಸವನ್ನು ವಿಫಲಗೊಳಿಸಲು ನಮ್ಮ ಕಾರ್ಯಕರ್ತರು ಸಜ್ಜಾಗಬೇಕಾಗಿದೆ ಎಂದು ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಶ್ರೀ ಉದ್ಯಾವರ ನಾಗೇಶ್ ಕುಮಾರ್‍ ನುಡಿದರು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಗಿರೀಶ್ ಕುಮಾರ್ ವಹಿಸಿದ್ದರು. ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಗಂಧಿ ಶೇಖರ್ ಉಪಸ್ಥಿತರಿದ್ದರು. ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಗಳಾದ ಶ್ರೀ ಆಬಿದ್ ಆಲಿಯವರು ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರ್ವಹಿಸಿದರು

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

16 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

16 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

17 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

17 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

17 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

18 hours ago