Featured

ಜನರಿಗೆ ಮಾಸ್ಕ್ ಹಾಕಿ ಎನ್ನುವ ಬದಲು ಒಂದಷ್ಟು ಎಚ್ಚರಿಕೆ ಕ್ರಮ ಕೈಗೊಳ್ಳುವ ಕೆಲಸ ಮಾಡಲಿ : ಸರ್ಕಾರಕ್ಕೆ ಯು.ಟಿ.ಖಾದರ್ ಆಗ್ರಹ – Vishwanews24

ಕೋವಿಡ್ ವಿಚಾರದಲ್ಲಿ ಜನರ ಮಧ್ಯೆ ಗೊಂದಲ ಸೃಷ್ಟಿ ಮಾಡಬಾರದು

ಮಾಧ್ಯಮಗಳು, ಸೋಶಿಯಲ್ ಮೀಡಿಯಾದಲ್ಲಿ ಬಂದಿದ್ದೇ ನಿಜ ಎಂದು ತಿಳಿಯಬಾರದು.

ಭಯದ ವಾತಾವರಣದಲ್ಲಿ ಸಿಲುಕಿಸುವ ಕೆಲಸ ಆಗಬಾರದು..

ಸರ್ಕಾರಕ್ಕೆ ಶಾಸಕ ಯು.ಟಿ.ಖಾದರ್ ಆಗ್ರಹ

ಬೆಂಗಳೂರು: ಜನರಿಗೆ ಮಾಸ್ಕ್ ಹಾಕಿ ಎನ್ನುವ ಬದಲು ಒಂದಷ್ಟು ಎಚ್ಚರಿಕೆ ಕ್ರಮ ಕೈಗೊಳ್ಳುವ ಕೆಲಸ ಮಾಡಲಿ. ಆಕ್ಸಿಜನ್ ಪ್ಲಾಂಟ್ ಕ್ವಾಲಿಟಿ ಚೆಕ್ ಮಾಡಿಕೊಳ್ಳಬೇಕು. ಅನುಷ್ಠಾನ ಮಾಡುವಾಗ ದೂರದೃಷ್ಟಿ ಆಲೋಚನೆ ಆಗಬೇಕು. ಗಡಿಬಿಡಿಯಲ್ಲಿ ಸರ್ಕಾರ ಕೆಲಸ ಮಾಡಬಾರದು ಎಂದು ಶಾಸಕ ಯು.ಟಿ.ಖಾದರ್  ಸರ್ಕಾರಕ್ಕೆ ಆಗ್ರಹಿಸಿದರು.

ಸುವರ್ಣಸೌಧ  ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ವಿಚಾರದಲ್ಲಿ ಜನರ ಮಧ್ಯೆ ಗೊಂದಲ ಸೃಷ್ಟಿ ಮಾಡಬಾರದು. ಜನರಿಗೆ ಆತಂಕ ತರಿಸಬಾರದು. ಮಾಧ್ಯಮಗಳು, ಸೋಶಿಯಲ್ ಮೀಡಿಯಾದಲ್ಲಿ ಬಂದಿದ್ದೇ ನಿಜ ಎಂದು ತಿಳಿಯಬಾರದು. ಚೈನಾದಲ್ಲಿ ಪರಿಸ್ಥಿತಿ ಏನಾಗಿದೆ ಅಂತ ನೋಡ್ಬೇಕು. ಜನರಿಗೆ ಜಾಗೃತಿ ಮೂಡಿಸಬೇಕು ಎಂದರು.

ಭಯದ ವಾತಾವರಣದಲ್ಲಿ ಸಿಲುಕಿಸುವ ಕೆಲಸ ಆಗಬಾರದು. ಯಾವ ದೇಶದಲ್ಲಿ ದೊಡ್ಡ ಅನಾಹುತ ಆಗಿದೆ ಎಂದು ಮಾಹಿತಿ ಬಂದಿಲ್ಲ. ಈ ಸೋಂಕಿನ ತೀವ್ರತೆ, ಸಾವು ಎಷ್ಟು ಆಗುತ್ತೆ ಅನ್ನೋದನ್ನ ಮಾಹಿತಿ ತಿಳಿಸಬೇಕು. ಚಳಿಗಾಲದಲ್ಲಿ ಕೆಲ ಸೋಂಕು ಬಂದು ಹೋಗುತ್ತೆ ಎಂದು ಹೇಳಿದರು.

ಕೋವಿಡ್  ಸಂಬಂಧಿಸಿದಂತೆ ಸರ್ಕಾರ ಜನರ ಮಧ್ಯೆ ಗೊಂದಲ ಸೃಷ್ಟಿಸಬಾರದು. ಚೀನಾದಲ್ಲಿ ಆಗಿರುವ ಕೋವಿಡ್ ಬಗ್ಗೆ ನಿಜಾಂಶ ತಿಳಿದುಕೊಳ್ಳಬೇಕು. ಬಿಎಫ್ 7 ಬಗ್ಗೆ ತಳಿಯಿಂದ ಹೇಗೆ ಜಾಗೃತಿ ಆಗಬೇಕು ಎಂದು ಸರ್ಕಾರ ತಿಳಿಸಲಿ. ಯಾವುದೇ ದೇಶದಲ್ಲಿ ದೊಡ್ಡ ಮಟ್ಟದ ಅನಾಹುತದ ಬಗ್ಗೆ ಮಾಹಿತಿ ಇಲ್ಲ. ವಿಶ್ವ ಆರೋಗ್ಯ ಸಂಸ್ಥೆ ಕೊಟ್ಟಿರುವ ಮಾಹಿತಿ ಬಗ್ಗೆ ಸರ್ಕಾರ ಸ್ಪಷ್ಟತೆ ಕೊಡಲಿ ಎಂದು ತಿಳಿಸಿದರು.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 hour ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 hour ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

2 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

2 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago