Featured

ಜನರಿಗೆ ಮಾಸ್ಕ್ ಹಾಕಿ ಎನ್ನುವ ಬದಲು ಒಂದಷ್ಟು ಎಚ್ಚರಿಕೆ ಕ್ರಮ ಕೈಗೊಳ್ಳುವ ಕೆಲಸ ಮಾಡಲಿ : ಸರ್ಕಾರಕ್ಕೆ ಯು.ಟಿ.ಖಾದರ್ ಆಗ್ರಹ – Vishwanews24

ಕೋವಿಡ್ ವಿಚಾರದಲ್ಲಿ ಜನರ ಮಧ್ಯೆ ಗೊಂದಲ ಸೃಷ್ಟಿ ಮಾಡಬಾರದು

ಮಾಧ್ಯಮಗಳು, ಸೋಶಿಯಲ್ ಮೀಡಿಯಾದಲ್ಲಿ ಬಂದಿದ್ದೇ ನಿಜ ಎಂದು ತಿಳಿಯಬಾರದು.

ಭಯದ ವಾತಾವರಣದಲ್ಲಿ ಸಿಲುಕಿಸುವ ಕೆಲಸ ಆಗಬಾರದು..

ಸರ್ಕಾರಕ್ಕೆ ಶಾಸಕ ಯು.ಟಿ.ಖಾದರ್ ಆಗ್ರಹ

ಬೆಂಗಳೂರು: ಜನರಿಗೆ ಮಾಸ್ಕ್ ಹಾಕಿ ಎನ್ನುವ ಬದಲು ಒಂದಷ್ಟು ಎಚ್ಚರಿಕೆ ಕ್ರಮ ಕೈಗೊಳ್ಳುವ ಕೆಲಸ ಮಾಡಲಿ. ಆಕ್ಸಿಜನ್ ಪ್ಲಾಂಟ್ ಕ್ವಾಲಿಟಿ ಚೆಕ್ ಮಾಡಿಕೊಳ್ಳಬೇಕು. ಅನುಷ್ಠಾನ ಮಾಡುವಾಗ ದೂರದೃಷ್ಟಿ ಆಲೋಚನೆ ಆಗಬೇಕು. ಗಡಿಬಿಡಿಯಲ್ಲಿ ಸರ್ಕಾರ ಕೆಲಸ ಮಾಡಬಾರದು ಎಂದು ಶಾಸಕ ಯು.ಟಿ.ಖಾದರ್  ಸರ್ಕಾರಕ್ಕೆ ಆಗ್ರಹಿಸಿದರು.

ಸುವರ್ಣಸೌಧ  ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ವಿಚಾರದಲ್ಲಿ ಜನರ ಮಧ್ಯೆ ಗೊಂದಲ ಸೃಷ್ಟಿ ಮಾಡಬಾರದು. ಜನರಿಗೆ ಆತಂಕ ತರಿಸಬಾರದು. ಮಾಧ್ಯಮಗಳು, ಸೋಶಿಯಲ್ ಮೀಡಿಯಾದಲ್ಲಿ ಬಂದಿದ್ದೇ ನಿಜ ಎಂದು ತಿಳಿಯಬಾರದು. ಚೈನಾದಲ್ಲಿ ಪರಿಸ್ಥಿತಿ ಏನಾಗಿದೆ ಅಂತ ನೋಡ್ಬೇಕು. ಜನರಿಗೆ ಜಾಗೃತಿ ಮೂಡಿಸಬೇಕು ಎಂದರು.

ಭಯದ ವಾತಾವರಣದಲ್ಲಿ ಸಿಲುಕಿಸುವ ಕೆಲಸ ಆಗಬಾರದು. ಯಾವ ದೇಶದಲ್ಲಿ ದೊಡ್ಡ ಅನಾಹುತ ಆಗಿದೆ ಎಂದು ಮಾಹಿತಿ ಬಂದಿಲ್ಲ. ಈ ಸೋಂಕಿನ ತೀವ್ರತೆ, ಸಾವು ಎಷ್ಟು ಆಗುತ್ತೆ ಅನ್ನೋದನ್ನ ಮಾಹಿತಿ ತಿಳಿಸಬೇಕು. ಚಳಿಗಾಲದಲ್ಲಿ ಕೆಲ ಸೋಂಕು ಬಂದು ಹೋಗುತ್ತೆ ಎಂದು ಹೇಳಿದರು.

ಕೋವಿಡ್  ಸಂಬಂಧಿಸಿದಂತೆ ಸರ್ಕಾರ ಜನರ ಮಧ್ಯೆ ಗೊಂದಲ ಸೃಷ್ಟಿಸಬಾರದು. ಚೀನಾದಲ್ಲಿ ಆಗಿರುವ ಕೋವಿಡ್ ಬಗ್ಗೆ ನಿಜಾಂಶ ತಿಳಿದುಕೊಳ್ಳಬೇಕು. ಬಿಎಫ್ 7 ಬಗ್ಗೆ ತಳಿಯಿಂದ ಹೇಗೆ ಜಾಗೃತಿ ಆಗಬೇಕು ಎಂದು ಸರ್ಕಾರ ತಿಳಿಸಲಿ. ಯಾವುದೇ ದೇಶದಲ್ಲಿ ದೊಡ್ಡ ಮಟ್ಟದ ಅನಾಹುತದ ಬಗ್ಗೆ ಮಾಹಿತಿ ಇಲ್ಲ. ವಿಶ್ವ ಆರೋಗ್ಯ ಸಂಸ್ಥೆ ಕೊಟ್ಟಿರುವ ಮಾಹಿತಿ ಬಗ್ಗೆ ಸರ್ಕಾರ ಸ್ಪಷ್ಟತೆ ಕೊಡಲಿ ಎಂದು ತಿಳಿಸಿದರು.

 

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

1 hour ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

2 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago