Featured

ಜನರಿಗೆ ಮುಖ ತೋರಿಸಿಕೊಳ್ಳಲಾಗದೆ ಮೋದಿ ಮುಖ ನೋಡಿ ವೋಟು ಹಾಕಿ ಎಂದು ಶೋಭಾ ಕರಂದ್ಲಾಜೆ ಕೇಳುತ್ತಿರುವುದು ಹಾಸ್ಯಾಸ್ಪದ : ಪ್ರಮೋದ್ ಮಧ್ವರಾಜ್

ಚಿಕ್ಕಮಗಳೂರು, : ಜನರಿಗೆ ಮುಖ ತೋರಿಸಿಕೊಳ್ಳಲಾಗದೆ ಮೋದಿ ಮುಖ ನೋಡಿ ವೋಟು ಹಾಕಿ ಎಂದು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕೇಳುತ್ತಿರುವುದು ಹಾಸ್ಯಾಸ್ಪದ ಎಂದು ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ವ್ಯಂಗ್ಯವಾಡಿದರು.

ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಕುಟುಂಬದ 60 ವರ್ಷದ ರಾಜಕೀಯ ಸೇವೆಯಲ್ಲಿ ಯಾರಿಂದಲೂ ನಯಾಪೈಸೆ ಲಂಚ ಪಡೆದಿಲ್ಲ. ಇದನ್ನು ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿಯೇ ಹೇಳುತ್ತೇನೆ. ನಾವು ಸಾಧ್ಯವಾದಾಗ ದಾನ – ಧರ್ಮ ಮಾಡಿದ್ದೇವೆ. ಯಾರ ಮುಂದೆಯೂ ಕೈಚಾಚದೆ ರಾಜಕೀಯದಲ್ಲಿ ಶುದ್ಧ ಹಸ್ತದಿಂದ ಸೇವೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಕಸ್ತೂರಿ ರಂಗನ್ ವರದಿ ಜಾರಿ ಸನ್ನಿಹಿತವಾಗಿದೆ. ಅದು ಬಂದರೆ ರಸ್ತೆ ನಿರ್ವಿುಸುವಂತಿಲ್ಲ. ಬೋರ್​ವೆಲ್ ಕೊರೆಯುವಂತಿಲ್ಲ. ಮನೆ ಕಟ್ಟುವ ಹಾಗಿಲ್ಲ. ಈ ರೀತಿ ಅರ್ಧ ಜಿಲ್ಲೆ ನಾಶವಾಗುತ್ತದೆಂಬುದನ್ನು ಮನಗಂಡು ಅದನ್ನು ಜಾರಿಗೆ ತರಬೇಡಿ ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ರಮಾನಾಥ ರೈ ಅಂದಿನ ಪರಿಸರ ಮಂತ್ರಿಯಾಗಿದ್ದರು. ನಾನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೆ. ಕಸ್ತೂರಿ ರಂಗನ್ ವರದಿ ಜಾರಿಯಾದರೆ ಚಿಕ್ಕಮಗಳೂರು ಜಿಲ್ಲೆಗೆ ಮಾರಕ ಎಂಬ ಅರಿವು ನಮಗಿತ್ತು. ಕೇಂದ್ರ ಸರ್ಕಾರ ಈ ಬಗ್ಗೆ ಚರ್ಚೆ ಮಾಡಲು ಎಲ್ಲ ಸಂಸದರ ಸಭೆ ಕರೆದಿತ್ತು. ಇಲ್ಲಿನ ಸಂಸದರು ಅಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಮಾಡಬೇಡಿ ಎಂದು ಧ್ವನಿ ಎತ್ತಬೇಕಿತ್ತು. ಆದರೆ ಆ ಸಭೆಗೇ ಅವರು ಗೈರಾಗಿದ್ದಿದ್ದು ವಿಪರ್ಯಾಸವೇ ಸರಿ. ಇಲ್ಲಿನ ಜನರ ಜೀವನ್ಮರಣದ ಜತೆಗೆ ಅವರು ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದರು.

Vishwa News 24

Recent Posts

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ – vishwanews24

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.),…

8 minutes ago

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

19 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

20 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

20 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

20 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

21 hours ago