ಚಿಕ್ಕಮಗಳೂರು, : ಜನರಿಗೆ ಮುಖ ತೋರಿಸಿಕೊಳ್ಳಲಾಗದೆ ಮೋದಿ ಮುಖ ನೋಡಿ ವೋಟು ಹಾಕಿ ಎಂದು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕೇಳುತ್ತಿರುವುದು ಹಾಸ್ಯಾಸ್ಪದ ಎಂದು ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ವ್ಯಂಗ್ಯವಾಡಿದರು.
ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಕುಟುಂಬದ 60 ವರ್ಷದ ರಾಜಕೀಯ ಸೇವೆಯಲ್ಲಿ ಯಾರಿಂದಲೂ ನಯಾಪೈಸೆ ಲಂಚ ಪಡೆದಿಲ್ಲ. ಇದನ್ನು ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿಯೇ ಹೇಳುತ್ತೇನೆ. ನಾವು ಸಾಧ್ಯವಾದಾಗ ದಾನ – ಧರ್ಮ ಮಾಡಿದ್ದೇವೆ. ಯಾರ ಮುಂದೆಯೂ ಕೈಚಾಚದೆ ರಾಜಕೀಯದಲ್ಲಿ ಶುದ್ಧ ಹಸ್ತದಿಂದ ಸೇವೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಕಸ್ತೂರಿ ರಂಗನ್ ವರದಿ ಜಾರಿ ಸನ್ನಿಹಿತವಾಗಿದೆ. ಅದು ಬಂದರೆ ರಸ್ತೆ ನಿರ್ವಿುಸುವಂತಿಲ್ಲ. ಬೋರ್ವೆಲ್ ಕೊರೆಯುವಂತಿಲ್ಲ. ಮನೆ ಕಟ್ಟುವ ಹಾಗಿಲ್ಲ. ಈ ರೀತಿ ಅರ್ಧ ಜಿಲ್ಲೆ ನಾಶವಾಗುತ್ತದೆಂಬುದನ್ನು ಮನಗಂಡು ಅದನ್ನು ಜಾರಿಗೆ ತರಬೇಡಿ ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ರಮಾನಾಥ ರೈ ಅಂದಿನ ಪರಿಸರ ಮಂತ್ರಿಯಾಗಿದ್ದರು. ನಾನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೆ. ಕಸ್ತೂರಿ ರಂಗನ್ ವರದಿ ಜಾರಿಯಾದರೆ ಚಿಕ್ಕಮಗಳೂರು ಜಿಲ್ಲೆಗೆ ಮಾರಕ ಎಂಬ ಅರಿವು ನಮಗಿತ್ತು. ಕೇಂದ್ರ ಸರ್ಕಾರ ಈ ಬಗ್ಗೆ ಚರ್ಚೆ ಮಾಡಲು ಎಲ್ಲ ಸಂಸದರ ಸಭೆ ಕರೆದಿತ್ತು. ಇಲ್ಲಿನ ಸಂಸದರು ಅಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಮಾಡಬೇಡಿ ಎಂದು ಧ್ವನಿ ಎತ್ತಬೇಕಿತ್ತು. ಆದರೆ ಆ ಸಭೆಗೇ ಅವರು ಗೈರಾಗಿದ್ದಿದ್ದು ವಿಪರ್ಯಾಸವೇ ಸರಿ. ಇಲ್ಲಿನ ಜನರ ಜೀವನ್ಮರಣದ ಜತೆಗೆ ಅವರು ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…