Featured

ಜನರಿಗೆ ಮುಖ ತೋರಿಸಿಕೊಳ್ಳಲಾಗದೆ ಮೋದಿ ಮುಖ ನೋಡಿ ವೋಟು ಹಾಕಿ ಎಂದು ಶೋಭಾ ಕರಂದ್ಲಾಜೆ ಕೇಳುತ್ತಿರುವುದು ಹಾಸ್ಯಾಸ್ಪದ : ಪ್ರಮೋದ್ ಮಧ್ವರಾಜ್

ಚಿಕ್ಕಮಗಳೂರು, : ಜನರಿಗೆ ಮುಖ ತೋರಿಸಿಕೊಳ್ಳಲಾಗದೆ ಮೋದಿ ಮುಖ ನೋಡಿ ವೋಟು ಹಾಕಿ ಎಂದು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕೇಳುತ್ತಿರುವುದು ಹಾಸ್ಯಾಸ್ಪದ ಎಂದು ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ವ್ಯಂಗ್ಯವಾಡಿದರು.

ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಕುಟುಂಬದ 60 ವರ್ಷದ ರಾಜಕೀಯ ಸೇವೆಯಲ್ಲಿ ಯಾರಿಂದಲೂ ನಯಾಪೈಸೆ ಲಂಚ ಪಡೆದಿಲ್ಲ. ಇದನ್ನು ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿಯೇ ಹೇಳುತ್ತೇನೆ. ನಾವು ಸಾಧ್ಯವಾದಾಗ ದಾನ – ಧರ್ಮ ಮಾಡಿದ್ದೇವೆ. ಯಾರ ಮುಂದೆಯೂ ಕೈಚಾಚದೆ ರಾಜಕೀಯದಲ್ಲಿ ಶುದ್ಧ ಹಸ್ತದಿಂದ ಸೇವೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಕಸ್ತೂರಿ ರಂಗನ್ ವರದಿ ಜಾರಿ ಸನ್ನಿಹಿತವಾಗಿದೆ. ಅದು ಬಂದರೆ ರಸ್ತೆ ನಿರ್ವಿುಸುವಂತಿಲ್ಲ. ಬೋರ್​ವೆಲ್ ಕೊರೆಯುವಂತಿಲ್ಲ. ಮನೆ ಕಟ್ಟುವ ಹಾಗಿಲ್ಲ. ಈ ರೀತಿ ಅರ್ಧ ಜಿಲ್ಲೆ ನಾಶವಾಗುತ್ತದೆಂಬುದನ್ನು ಮನಗಂಡು ಅದನ್ನು ಜಾರಿಗೆ ತರಬೇಡಿ ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ರಮಾನಾಥ ರೈ ಅಂದಿನ ಪರಿಸರ ಮಂತ್ರಿಯಾಗಿದ್ದರು. ನಾನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೆ. ಕಸ್ತೂರಿ ರಂಗನ್ ವರದಿ ಜಾರಿಯಾದರೆ ಚಿಕ್ಕಮಗಳೂರು ಜಿಲ್ಲೆಗೆ ಮಾರಕ ಎಂಬ ಅರಿವು ನಮಗಿತ್ತು. ಕೇಂದ್ರ ಸರ್ಕಾರ ಈ ಬಗ್ಗೆ ಚರ್ಚೆ ಮಾಡಲು ಎಲ್ಲ ಸಂಸದರ ಸಭೆ ಕರೆದಿತ್ತು. ಇಲ್ಲಿನ ಸಂಸದರು ಅಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಮಾಡಬೇಡಿ ಎಂದು ಧ್ವನಿ ಎತ್ತಬೇಕಿತ್ತು. ಆದರೆ ಆ ಸಭೆಗೇ ಅವರು ಗೈರಾಗಿದ್ದಿದ್ದು ವಿಪರ್ಯಾಸವೇ ಸರಿ. ಇಲ್ಲಿನ ಜನರ ಜೀವನ್ಮರಣದ ಜತೆಗೆ ಅವರು ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದರು.

Vishwa News 24

Recent Posts

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

15 minutes ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

30 minutes ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

42 minutes ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

47 minutes ago

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…

1 hour ago

ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ – vishwanews24

ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ ಸುಳ್ಯ: ಮನೆಯ ಮುಂಭಾಗದಲ್ಲಿದ್ದ ತೆಂಗಿನ…

1 hour ago