ಬೆಂಗಳೂರು: ಕೇಜ್ರಿವಾಲ್ ಒಳ್ಳೆಯ ಕೆಲಸ ಮಾಡಿದ್ದರು, ಜನರು ಜಿಡಿಪಿ ಕುಸಿತದಿಂದ ರೋಸಿ ಹೋಗಿದ್ದರು. ಹಾಗಾಗಿ ದೆಹಲಿಯಲ್ಲಿ ಜನರು ಆಮ್ ಆದ್ಮಿ ಪಾರ್ಟಿ (ಆಪ್) ಕೈ ಹಿಡಿದಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿಯವರು ಎಲ್ಲ ರೀತಿಯ ಸಂಪನ್ಮೂಲಗಳನ್ನು ಇಟ್ಟುಕೊಂಡಿದ್ದರು. ಅವರದೇ ಪಕ್ಷದ ಕೇಂದ್ರ ಸರ್ಕಾರ, ಸಂಸದರು ಇದ್ದರೂ ಗೆಲ್ಲಲು ಆಗಲಿಲ್ಲ. ಒಂದಂತೂ ಸತ್ಯ, ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎನ್ನುತ್ತಿದ್ದ ಬಿಜೆಪಿಯನ್ನು ಈಗ ಜನರೇ ‘ಬಿಜೆಪಿ ಮುಕ್ತ ಭಾರತ’ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ಸೋಲುತ್ತಿದೆ ಎಂದರು.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಪ್ ಜಯಗಳಿಸುವುದೆಂದು ನಮಗೆ ಮೊದಲೇ ಗೊತ್ತಿತ್ತು. ಕಾಂಗ್ರೆಸ್ ನಾಲ್ಕೈದು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದುಕೊಂಡಿದ್ದೆವು, ಇದರಿಂದ ನಮಗೇನೂ ನಷ್ಟವಾಗಿಲ್ಲ ಎಂದು ಹೇಳಿದರು.
ನಿನ್ನೆ ಮಂತ್ರಿಯಾದ ಚಿಕ್ಕಬಳ್ಳಾಪುರದವರೊಬ್ಬರು ಏನು ಮಾಡಿದರೂ ಅಲ್ಲಿ ವರ್ಕೌಟ್ ಆಗಿಲ್ಲ. ಅಲ್ಲಿ ನಮಗೆ ಸ್ಪಷ್ಟಬಹುಮತ ಬಂದಿದೆ. ಹೊಸಕೋಟೆಯಲ್ಲಿ ನಮ್ಮವರಿಗೆ ಖರ್ಚು ಮಾಡುವ ಶಕ್ತಿ ಇರಲಿಲ್ಲ. ಎಂಟಿಬಿ ನಾಗರಾಜ್ ಹಣ ಖರ್ಚು ಮಾಡಿದ್ದಾರೆ. ಅದಕ್ಕೇ ಹೊಸಕೋಟೆಯಲ್ಲಿ ನಮಗೆ ಹಿನ್ನಡೆಯಾಗಿದೆ ಎಂದು ಹೇಳಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…