Featured

ಜನರು ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದ ನಂತರ ಸರ್ಕಾರವನ್ನು ದೂರುವ ಕೆಲಸ ಮಾಡುತ್ತಿದ್ದಾರೆ : ಖರ್ಗೆ ಬೇಸರ  – vishwanews24

ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದ ಬೊಕ್ಕಸ ಖಾಲಿ ಆಗಿಲ್ಲ ..

ಸಿದ್ದರಾಮಯ್ಯ ಇದ್ದಾಗ ಲಕ್ಷ್ಮೀ ಕಾಲುಕುಂಟಿಕೊಂಡು ಬಿದ್ದಿರುತ್ತಾಳೆ: ಖರ್ಗೆ

ಮೈಸೂರು ಕರ್ನಾಟಕ ಕಾಂಗ್ರೆಸ್ ಸರ್ಕಾರವು ಉಚಿತ ಗ್ಯಾರಂಟಿ ಯೋಜನೆಗಳನ್ನು ಸಾಮಾನ್ಯ ಜನರಿಗಾಗಿ ಮಾಡಿದೆ. ಆದರೂ, ಜನರು ಅವುಗಳ ಪ್ರಯೋಜನ ಪಡೆದ ನಂತರ ಸರ್ಕಾರವನ್ನು ದೂರುವ ಕೆಲಸ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೇಸರ ವ್ಯಕ್ತಪಡಿಸಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ನಮಗಾಗಿ ನಾವು ಮಾಡಿಲ್ಲ. ಜನಸಾಮಾನ್ಯರಿಗಾಗಿ ಮಾಡಿದ್ದೇವೆ. ನೀವೆಲ್ಲ ಇದರ ಪ್ರಯೋಜನ ಪಡೆಯುತ್ತಿದ್ದೀರಿ. ಎಲ್ಲ ಪಕ್ಷದವರು ಪ್ರಯೋಜನ ಪಡೆಯುತ್ತಾರೆ. ಆಮೇಲೆ, ಅಭಿವೃದ್ಧಿ ಆಗುತ್ತಿಲ್ಲ. ರಾಜ್ಯ ಬರ್ಬಾದ್ ಆಗುತ್ತಿದೆ ಎಂದು ಟೀಕಿಸುತ್ತಾರೆ. ನಮ್ಮ ಪಕ್ಷದವರೇ ಕೆಲವರು ಆಗಾಗ ನನ್ನನ್ನು ಭೇಟಿಯಾದಾಗ ಹೀಗೆ ಹೇಳುತ್ತಿರುತ್ತಾರೆ ಎಂದರು.

ಗ್ಯಾರಂಟಿ ಯೋಜನೆಗಳನ್ನು ನಾವು ಕಾಂಗ್ರೆಸ್​​ನವರಿಗಷ್ಟೇ ನೀಡುತ್ತಿಲ್ಲ. ಎಲ್ಲ ವರ್ಗದ ಜನ, ಎಲ್ಲ ಪಕ್ಷದವರು ಅದರ ಪ್ರಯೋಜನ ಪಡೆಯುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದ ಬೊಕ್ಕಸ ಖಾಲಿ ಆಗಿಲ್ಲ ಎಂದು ಖರ್ಗೆ ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗಿದೆ ಎಂಬ ಪ್ರತಿಪಕ್ಷದವರ ಆರೋಪ ಸುಳ್ಳಿನಿಂದ ಕೂಡಿದೆ. ಸರ್ಕಾರದಲ್ಲಿ ದುಡ್ಡಿಲ್ಲ ಎಂದಾದರೆ, ಶಾಸಕರಿಗೆ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಹೇಗೆ ಸಾಧ್ಯ ಎಂದು ಖರ್ಗೆ ಪ್ರಶ್ನಿಸಿದರು. ಅದೃಷ್ಟವಶಾತ್, ಸಿದ್ದರಾಮಯ್ಯ ಮುಖ್ಯಮಂತ್ರಿ ಆದಾಗ ಕರ್ನಾಟಕದಲ್ಲಿ ದುಡ್ಡಿಗೆ ಬರ ಉಂಟಾಗುವುದಿಲ್ಲ. ಲಕ್ಷ್ಮೀ ಕಾಲು ಕುಂಟಿಕೊಂಡು ಬಿದ್ದಿರುತ್ತಾಳೆ. ಆದರೆ ಬಿಜೆಪಿ ಅಧಿಕಾರಕ್ಕೆ ಬಂದರೆ, ಸರ್ಕಾರದಲ್ಲಿ ಹಣ ಇರುವುದಿಲ್ಲ ಎಂದು ಖರ್ಗೆ ಟೀಕಿಸಿದರು.

 

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago