ನವದೆಹಲಿ : ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ, ಕೇಂದ್ರ ಸರ್ಕಾರ ತನ್ನ ಆಸ್ತಿಗಳನ್ನು ಮಾರಾಟ ಮಾಡುವುದರಲ್ಲಿ ಬ್ಯೂಸಿಯಾಗಿದ್ದು, ಜನರು ತಮ್ಮ ಸುರಕ್ಷತೆಯನ್ನು ತಾವೇ ನೋಡಿಕೊಳ್ಳಬೇಕು ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ಗಾಂಧಿ ಹೇಳಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಕಳೆದ 24 ಗಂಟೆಗಳಲ್ಲಿ ಕೋವಿಡ್ನ ಸೋಂಕು ಆತಂಕಕಾರಿಯಾಗಿ ಹೆಚ್ಚುತ್ತಿದೆ. ಮುಂದಿನ ಅಲೆಯನ್ನು ನಿಯಂತ್ರಿಸಲು ಮತ್ತು ಗಂಭೀರ ಪರಿಸ್ಥಿತಿಯನ್ನು ನಿಭಾಯಿಸಲು ಲಸಿಕಾ ಅಭಿಯಾನ ತೀವ್ರವಾಗಿ ಹೆಚ್ಚಾಗಬೇಕಿತ್ತು. ಆದರೆ ಕೇಂದ್ರ ಸರ್ಕಾರ ಮಾರಾಟದಲ್ಲಿ ಬ್ಯೂಸಿಯಾಗಿದೆ. ಹಾಗಾಗಿ ಜನ ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು, ಎಚ್ಚರವಾಗಿರಬೇಕು ಎಂದು ಉಲ್ಲೇಖಿಸಿದ್ದಾರೆ.
ನಿನ್ನೆ ಒಂದೇ ದಿನದಲ್ಲಿ ದೇಶದಲ್ಲಿನ ಕೊರೊನಾ ಪ್ರಕರಣಗಳ ಸಂಖ್ಯೆ 46,164ಕ್ಕೆ ಹೆಚ್ಚಾಗಿದೆ. 607 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು 4,36,365 ಮಂದಿ ಸಾವನ್ನಪ್ಪಿದರೆ, ಸೋಂಕಿನ ಸಂಖ್ಯೆ 3,25,58,530ಕ್ಕೆ ಹೆಚ್ಚಾಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ 3,33,725ಕ್ಕೆ ಏರಿಕೆಯಾಗಿದೆ.
70 ವರ್ಷಗಳಿಂದ ಸಂಪಾದಿಸಲಾಗಿದ್ದ ಆಸ್ತಿಗಳನ್ನು ಬಿಜೆಪಿ ಸರ್ಕಾರ ಮಾರಾಟ ಮಾಡುತ್ತಿದೆ ಎಂದು ಪೈಪ್ಲೈನ್ ಯೋಜನೆಯ ಖಾಸಗೀಕರಣವನ್ನು ಉಲ್ಲೇಖಿಸಿ ರಾಹುಲ್ಗಾಂಧಿ ಟೀಕೆ ಮಾಡಿದರು.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…