Featured

ಜನರು ತಮ್ಮ ಸುರಕ್ಷತೆಯನ್ನು ತಾವೇ ನೋಡಿಕೊಳ್ಳಬೇಕು, ಮೋದಿ ಸರ್ಕಾರ ಆಸ್ತಿ ಮಾರಾಟದಲ್ಲಿ ಬ್ಯೂಸಿ ಆಗಿದ್ದಾರೆ : ರಾಹುಲ್‍ಗಾಂಧಿ -Vishwanews24

ಜನರು ತಮ್ಮ ಸುರಕ್ಷತೆಯನ್ನು ತಾವೇ ನೋಡಿಕೊಳ್ಳಬೇಕು, ಮೋದಿ ಸರ್ಕಾರ ಆಸ್ತಿ ಮಾರಾಟದಲ್ಲಿ ಬ್ಯೂಸಿ ಆಗಿದ್ದಾರೆ : ರಾಹುಲ್‍ಗಾಂಧಿ -Vishwanews24

ನವದೆಹಲಿ : ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ, ಕೇಂದ್ರ ಸರ್ಕಾರ ತನ್ನ ಆಸ್ತಿಗಳನ್ನು ಮಾರಾಟ ಮಾಡುವುದರಲ್ಲಿ ಬ್ಯೂಸಿಯಾಗಿದ್ದು, ಜನರು ತಮ್ಮ ಸುರಕ್ಷತೆಯನ್ನು ತಾವೇ ನೋಡಿಕೊಳ್ಳಬೇಕು ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಹೇಳಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಕಳೆದ 24 ಗಂಟೆಗಳಲ್ಲಿ ಕೋವಿಡ್‍ನ ಸೋಂಕು ಆತಂಕಕಾರಿಯಾಗಿ ಹೆಚ್ಚುತ್ತಿದೆ. ಮುಂದಿನ ಅಲೆಯನ್ನು ನಿಯಂತ್ರಿಸಲು ಮತ್ತು ಗಂಭೀರ ಪರಿಸ್ಥಿತಿಯನ್ನು ನಿಭಾಯಿಸಲು ಲಸಿಕಾ ಅಭಿಯಾನ ತೀವ್ರವಾಗಿ ಹೆಚ್ಚಾಗಬೇಕಿತ್ತು. ಆದರೆ ಕೇಂದ್ರ ಸರ್ಕಾರ ಮಾರಾಟದಲ್ಲಿ ಬ್ಯೂಸಿಯಾಗಿದೆ. ಹಾಗಾಗಿ ಜನ ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು, ಎಚ್ಚರವಾಗಿರಬೇಕು ಎಂದು ಉಲ್ಲೇಖಿಸಿದ್ದಾರೆ.

ನಿನ್ನೆ ಒಂದೇ ದಿನದಲ್ಲಿ ದೇಶದಲ್ಲಿನ ಕೊರೊನಾ ಪ್ರಕರಣಗಳ ಸಂಖ್ಯೆ 46,164ಕ್ಕೆ ಹೆಚ್ಚಾಗಿದೆ. 607 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು 4,36,365 ಮಂದಿ ಸಾವನ್ನಪ್ಪಿದರೆ, ಸೋಂಕಿನ ಸಂಖ್ಯೆ 3,25,58,530ಕ್ಕೆ ಹೆಚ್ಚಾಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ 3,33,725ಕ್ಕೆ ಏರಿಕೆಯಾಗಿದೆ.

70 ವರ್ಷಗಳಿಂದ ಸಂಪಾದಿಸಲಾಗಿದ್ದ ಆಸ್ತಿಗಳನ್ನು ಬಿಜೆಪಿ ಸರ್ಕಾರ ಮಾರಾಟ ಮಾಡುತ್ತಿದೆ ಎಂದು ಪೈಪ್‍ಲೈನ್ ಯೋಜನೆಯ ಖಾಸಗೀಕರಣವನ್ನು ಉಲ್ಲೇಖಿಸಿ ರಾಹುಲ್‍ಗಾಂಧಿ ಟೀಕೆ ಮಾಡಿದರು.

Vishwa News 24

Recent Posts

ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ – vishwanews24

ವೆನ್‍ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…

18 minutes ago

ಡೇವಿಡ್ ಡಿಸೋಜ ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಹಂತಕರಿಗೆ ಬೈಕ್ ಒದಗಿಸಿದ್ದ ಮತ್ತೊಬ್ಬಆರೋಪಿ ಬಂಧನ ಉಡುಪಿ :  ಮುದರಂಗಡಿ ಗ್ರಾಮ ಪಂಚಾಯತ್…

31 minutes ago

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ – vishwanews24

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ ವಿದ್ಯಾರ್ಥಿನಿಯ ನಿಗೂಢ ಸಾವಿಗೆ ಪೋಷಕರ ಅನುಮಾನ ಹಾಸನ: ಚನ್ನರಾಯಪಟ್ಟಣದ  ಅಂಬಿಕ ನಗರದಲ್ಲಿ…

40 minutes ago

ಬೆಳ್ತಂಗಡಿ: ಸುಮಂತ್ ಸಾವಿನ ಪ್ರಕರಣ; ಬ್ರೈನ್ ಮ್ಯಾಪಿಂಗ್, ನಾರ್ಕೋ ಪರೀಕ್ಷೆ ಆರಂಭ – vishwanews24

ಬೆಳ್ತಂಗಡಿ: ಸುಮಂತ್ ಸಾವಿನ ಪ್ರಕರಣ; ಬ್ರೈನ್ ಮ್ಯಾಪಿಂಗ್, ನಾರ್ಕೋ ಪರೀಕ್ಷೆ ಆರಂಭ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗೇರುಕಟ್ಟೆ…

49 minutes ago

ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ ; ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ : ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ : ಸಂಸದ ಕ್ಯಾ. ಬ್ರಿಜೇಶ್ ಚೌಟ…

1 hour ago

ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ – vishwanews24

ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ…

1 hour ago