ಬೆಂಗಳೂರು: ಒಂದರ ಹಿಂದೆ ಒಂದರಂತೆ ಹಲವು ರಾಜ್ಯಗಳು ಬಿಜೆಪಿಯನ್ನು ತಿರಸ್ಕರಿಸುತ್ತಿದೆ. ಹೀಗಾಗಿಯೇ ಜಾರ್ಖಾಂಡ್ ಜನತೆ ಬಿಜೆಪಿ ಕೈಬಿಟ್ಟು, ಜೆಎಂಎಂ ಮೈತ್ರಿಕೂಟದ ಆಯ್ಕೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮಧ್ಯಪ್ರದೇಶ, ರಾಜಸ್ಥಾನ, ಪಂಜಾಬ್ ಹಾಗೂ ಮಹಾರಾಷ್ಟ್ರ ರಾಜ್ಯಗಳ ಚುನಾವಣಾ ಫಲಿತಾಂಶ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರದಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ದೇಶ ಕಾಂಗ್ರೆಸ್ ಮುಕ್ತವಾಗಬೇಕೆಂದು ಬಯಸಿದ್ದಾರೆ. ಆದರೆ, ಜನರು ಬಿಜೆಪಿ ಮುಕ್ತ ಭಾರತಕ್ಕಾಗಿ ಕಾಯುತ್ತಿದ್ದಾರೆಂದು ಹೇಳಿದ್ದಾರೆ.
ಇದರಂತೆ ಕಾಂಗ್ರೆಸ್ ಹಿರಿಯ ದಿನೇಶ್ ಗುಂಡೂರಾವ್ ಕೂಡ ಮಾತನಾಡಿ, ಜಾರ್ಖಾಂಡ್ ಫಲಿತಾಂಶ ಜನರ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಜಾರ್ಖಾಂಡ್ ಕಾಂಗ್ರೆಸ್ ಪಕ್ಷಕ್ಕೆ ಶುಭಾಶಯಗಳನ್ನು ಕೋರುತ್ತೇನೆ. ಇದೊಂದು ಅದ್ಭುತ ಫಲಿತಾಂಶ. ದೇಶದ ಜನತೆಗೆ ಫಲಿತಾಂಶ ನೈತಿಕ ಸ್ಥೈರ್ಯವನ್ನು ಹೆಚ್ಚಿದೆ. ಪೌರತ್ವ ಕಾಯ್ದೆ ಹಾಗೂ ಎನ್ಆರ್’ಸಿ ವಿರುದ್ಧ ರಾಷ್ಟ್ರಾದ್ಯಂತ ಪ್ರತಿಭಟನೆ ಮುಂದುವರೆಸುತ್ತೇವೆಂದು ತಿಳಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…