ಬೆಂಗಳೂರು: ಒಂದರ ಹಿಂದೆ ಒಂದರಂತೆ ಹಲವು ರಾಜ್ಯಗಳು ಬಿಜೆಪಿಯನ್ನು ತಿರಸ್ಕರಿಸುತ್ತಿದೆ. ಹೀಗಾಗಿಯೇ ಜಾರ್ಖಾಂಡ್ ಜನತೆ ಬಿಜೆಪಿ ಕೈಬಿಟ್ಟು, ಜೆಎಂಎಂ ಮೈತ್ರಿಕೂಟದ ಆಯ್ಕೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮಧ್ಯಪ್ರದೇಶ, ರಾಜಸ್ಥಾನ, ಪಂಜಾಬ್ ಹಾಗೂ ಮಹಾರಾಷ್ಟ್ರ ರಾಜ್ಯಗಳ ಚುನಾವಣಾ ಫಲಿತಾಂಶ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರದಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ದೇಶ ಕಾಂಗ್ರೆಸ್ ಮುಕ್ತವಾಗಬೇಕೆಂದು ಬಯಸಿದ್ದಾರೆ. ಆದರೆ, ಜನರು ಬಿಜೆಪಿ ಮುಕ್ತ ಭಾರತಕ್ಕಾಗಿ ಕಾಯುತ್ತಿದ್ದಾರೆಂದು ಹೇಳಿದ್ದಾರೆ.
ಇದರಂತೆ ಕಾಂಗ್ರೆಸ್ ಹಿರಿಯ ದಿನೇಶ್ ಗುಂಡೂರಾವ್ ಕೂಡ ಮಾತನಾಡಿ, ಜಾರ್ಖಾಂಡ್ ಫಲಿತಾಂಶ ಜನರ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಜಾರ್ಖಾಂಡ್ ಕಾಂಗ್ರೆಸ್ ಪಕ್ಷಕ್ಕೆ ಶುಭಾಶಯಗಳನ್ನು ಕೋರುತ್ತೇನೆ. ಇದೊಂದು ಅದ್ಭುತ ಫಲಿತಾಂಶ. ದೇಶದ ಜನತೆಗೆ ಫಲಿತಾಂಶ ನೈತಿಕ ಸ್ಥೈರ್ಯವನ್ನು ಹೆಚ್ಚಿದೆ. ಪೌರತ್ವ ಕಾಯ್ದೆ ಹಾಗೂ ಎನ್ಆರ್’ಸಿ ವಿರುದ್ಧ ರಾಷ್ಟ್ರಾದ್ಯಂತ ಪ್ರತಿಭಟನೆ ಮುಂದುವರೆಸುತ್ತೇವೆಂದು ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…