ಶಿವಮೊಗ್ಗ: “ಮೋದಿ ಹಾಗೂ ಅಮಿತ್ ಶಾ ಅವರನ್ನು ರಾಷ್ಟ್ರದ ಜನರು ಎರಡು ಕಣ್ಣುಗಳಂತೆ ನೋಡುತ್ತಿದ್ದಾರೆ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಹೇಳಿದ್ದಾರೆ.
ನಗರದ ಬಸ್ ನಿಲ್ದಾಣದಲ್ಲಿ ಶುಕ್ರವಾರ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಧರ್ಮದ ವಿಷಯದಲ್ಲಿ ಮುಸಲ್ಮಾನರು ಪಾಕಿಸ್ತಾನಕ್ಕೆ ಹೋಗಲಿ, ಹಿಂದೂಗಳು ಭಾರತದಲ್ಲಿರಲಿ ಎಂದು ಅಂಬೇಡ್ಕರ್ ಅವರೇ ಹೇಳಿದ್ದರು, ಆದರೆ ಮೋದಿಯವರು ದೇಶದಲ್ಲಿರುವ ಮುಸಲ್ಮಾನರನ್ನು ಜೊತೆಗೆ ತೆಗೆದುಕೊಂಡು ಹೋಗುವ ಕಾರ್ಯವನ್ನು ಮಾಡುತ್ತಿದ್ದಾರೆ” ಎಂದು ಹೇಳಿದರು.
“ಮೋದಿಯವರು ರಾಷ್ಟ್ರದ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಪೌರತ್ವ ಕಾಯ್ದೆಯಿಂದ ಮುಸಲ್ಮಾನರಿಗೆ ಯಾವುದೇ ತೊಂದರೆ ಇಲ್ಲ. ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್ಸಿಗರ ಕುತಂತ್ರ ಈ ದೇಶದಲ್ಲಿ ನಡೆಯುತ್ತಿದೆ. ಎಷ್ಟೇ ಗೊಂದಲ ಸೃಷ್ಟಿ ಮಾಡಿದರೂ ಕಾಂಗ್ರೆಸ್ ಮತ್ತೆ ರಾಷ್ಟ್ರ ಹಾಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಾರದು. ಇನ್ನು ಮುಂದೆಯೂ ಮೋದಿಯವರೇ ಪ್ರಧಾನಿಯಾಗಿರುತ್ತಾರೆ” ಎಂದರು.
“ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭ ಪೌರತ್ವ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದ್ದರೂ ಸಹ ಸಾಧ್ಯವಾಗಿಲ್ಲ. ಈ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಮೋದಿಯವರು ಉತ್ತಮ ಕೆಲಸ ಮಾಡಿದ್ದಾರೆ” ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…