Featured

ಜನರೊಂದಿಗೆ ಬೆರೆತರೆ ಮತ್ತಷ್ಟು ಶಕ್ತಿ ಬರುತ್ತದೆ ;ನಾನು ಶಹೆನ್‏ಶಾಹ್ ಅಥವಾ ಚಕ್ರವರ್ತಿ ಅಲ್ಲ, :ತಮ್ಮ ಭದ್ರತೆ ಬಗ್ಗೆ ಪ್ರಧಾನಿ ಮೋದಿ

ನವದೆಹಲಿ: ನಾನು ಶಹೆನ್‏ಶಾಹ್ ಅಥವಾ ಚಕ್ರವರ್ತಿ ಅಲ್ಲ. ಜನರೊಂದಿಗೆ ಬೆರೆಯುವುದರಿಂದ ಮತ್ತು ಅವರ ಶುಭಹಾರೈಕೆಗಳಿಂದ ನನಗೆ ಮತ್ತಷ್ಟು ಶಕ್ತಿ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
‘ಸ್ವರಾಜ್ಯ’ ನಿಯತಕಾಲಿಕಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ಭದ್ರತೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮತ್ತು ರೋಡ್ ಶೋ ನಡೆಸಬಾರದು ಎಂಬ ಬಗ್ಗೆ ಪ್ರತಿಕ್ರಿಯೆಸಿದ ಪ್ರಧಾನಿ ಮೋದಿ ಅವರು, ರಸ್ತೆಯಲ್ಲಿ ಜನ ನನ್ನ ಸ್ವಾಗತಿಸಲು ಮತ್ತು ಶುಭಾಶಯ ಕೋರಲು ಕಾಯುತ್ತಿದ್ದರೆ ನಾನು ಕಾರಿನಲ್ಲಿ ಕುಳಿತುಕೊಳ್ಳಲು ಆಗುವುದಿಲ್ಲ ಎಂದರು.
ನಾನು ಶಹೆನ್‏ಶಾಹ್ ಅಥವಾ ಚಕ್ರವರ್ತಿ ಅಲ್ಲ, ಜನರೊಂದಿಗೆ ಬೆರೆತರೆ ಮತ್ತಷ್ಟು ಶಕ್ತಿ ಬರುತ್ತದೆ. ನಾನು ಪ್ರಯಾಣ ಮಾಡಬೇಕಾದರೆ ರಸ್ತೆಯಲ್ಲಿ ಎಲ್ಲಾ ವಯೋಮಾನದ ನೂರಾರು ಜನರನ್ನು ನೋಡುತ್ತೇನೆ. ಅವರೆಲ್ಲರೂ ನನಗೆ ಶುಭಾಶಯ ಕೋರಲು ಮತ್ತು ಸ್ವಾಗತಿಸಲು ಬಂದಿರುತ್ತಾರೆ. ಅವರ ಪ್ರೀತಿ ಮತ್ತು ಹಾರೈಕೆಯನ್ನು ನೋಡಿಯೂ ನಾನು ಕಾರಿನಲ್ಲಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ನಕ್ಸಲರಿಂದ ಜೀವ ಬೇದರಿಕೆ ಇದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಇತ್ತೀಚಿಗೆ ಗೃಹ ಸಚಿವಾಲಯ ಅವರ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದು, ಸಾರ್ವಜನಿಕ ರ್ಯಾಲಿ ನಡೆಸದಂತೆ ಪ್ರಧಾನಿಗೆ ಸಲಹೆ ನೀಡಿತ್ತು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago