Featured

ಜನರೊಂದಿಗೆ ಬೆರೆತರೆ ಮತ್ತಷ್ಟು ಶಕ್ತಿ ಬರುತ್ತದೆ ;ನಾನು ಶಹೆನ್‏ಶಾಹ್ ಅಥವಾ ಚಕ್ರವರ್ತಿ ಅಲ್ಲ, :ತಮ್ಮ ಭದ್ರತೆ ಬಗ್ಗೆ ಪ್ರಧಾನಿ ಮೋದಿ

ನವದೆಹಲಿ: ನಾನು ಶಹೆನ್‏ಶಾಹ್ ಅಥವಾ ಚಕ್ರವರ್ತಿ ಅಲ್ಲ. ಜನರೊಂದಿಗೆ ಬೆರೆಯುವುದರಿಂದ ಮತ್ತು ಅವರ ಶುಭಹಾರೈಕೆಗಳಿಂದ ನನಗೆ ಮತ್ತಷ್ಟು ಶಕ್ತಿ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
‘ಸ್ವರಾಜ್ಯ’ ನಿಯತಕಾಲಿಕಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ಭದ್ರತೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮತ್ತು ರೋಡ್ ಶೋ ನಡೆಸಬಾರದು ಎಂಬ ಬಗ್ಗೆ ಪ್ರತಿಕ್ರಿಯೆಸಿದ ಪ್ರಧಾನಿ ಮೋದಿ ಅವರು, ರಸ್ತೆಯಲ್ಲಿ ಜನ ನನ್ನ ಸ್ವಾಗತಿಸಲು ಮತ್ತು ಶುಭಾಶಯ ಕೋರಲು ಕಾಯುತ್ತಿದ್ದರೆ ನಾನು ಕಾರಿನಲ್ಲಿ ಕುಳಿತುಕೊಳ್ಳಲು ಆಗುವುದಿಲ್ಲ ಎಂದರು.
ನಾನು ಶಹೆನ್‏ಶಾಹ್ ಅಥವಾ ಚಕ್ರವರ್ತಿ ಅಲ್ಲ, ಜನರೊಂದಿಗೆ ಬೆರೆತರೆ ಮತ್ತಷ್ಟು ಶಕ್ತಿ ಬರುತ್ತದೆ. ನಾನು ಪ್ರಯಾಣ ಮಾಡಬೇಕಾದರೆ ರಸ್ತೆಯಲ್ಲಿ ಎಲ್ಲಾ ವಯೋಮಾನದ ನೂರಾರು ಜನರನ್ನು ನೋಡುತ್ತೇನೆ. ಅವರೆಲ್ಲರೂ ನನಗೆ ಶುಭಾಶಯ ಕೋರಲು ಮತ್ತು ಸ್ವಾಗತಿಸಲು ಬಂದಿರುತ್ತಾರೆ. ಅವರ ಪ್ರೀತಿ ಮತ್ತು ಹಾರೈಕೆಯನ್ನು ನೋಡಿಯೂ ನಾನು ಕಾರಿನಲ್ಲಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ನಕ್ಸಲರಿಂದ ಜೀವ ಬೇದರಿಕೆ ಇದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಇತ್ತೀಚಿಗೆ ಗೃಹ ಸಚಿವಾಲಯ ಅವರ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದು, ಸಾರ್ವಜನಿಕ ರ್ಯಾಲಿ ನಡೆಸದಂತೆ ಪ್ರಧಾನಿಗೆ ಸಲಹೆ ನೀಡಿತ್ತು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

22 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago