Featured

ಜನರೊಂದಿಗೆ ಬೆರೆತರೆ ಮತ್ತಷ್ಟು ಶಕ್ತಿ ಬರುತ್ತದೆ ;ನಾನು ಶಹೆನ್‏ಶಾಹ್ ಅಥವಾ ಚಕ್ರವರ್ತಿ ಅಲ್ಲ, :ತಮ್ಮ ಭದ್ರತೆ ಬಗ್ಗೆ ಪ್ರಧಾನಿ ಮೋದಿ

ನವದೆಹಲಿ: ನಾನು ಶಹೆನ್‏ಶಾಹ್ ಅಥವಾ ಚಕ್ರವರ್ತಿ ಅಲ್ಲ. ಜನರೊಂದಿಗೆ ಬೆರೆಯುವುದರಿಂದ ಮತ್ತು ಅವರ ಶುಭಹಾರೈಕೆಗಳಿಂದ ನನಗೆ ಮತ್ತಷ್ಟು ಶಕ್ತಿ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
‘ಸ್ವರಾಜ್ಯ’ ನಿಯತಕಾಲಿಕಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ಭದ್ರತೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮತ್ತು ರೋಡ್ ಶೋ ನಡೆಸಬಾರದು ಎಂಬ ಬಗ್ಗೆ ಪ್ರತಿಕ್ರಿಯೆಸಿದ ಪ್ರಧಾನಿ ಮೋದಿ ಅವರು, ರಸ್ತೆಯಲ್ಲಿ ಜನ ನನ್ನ ಸ್ವಾಗತಿಸಲು ಮತ್ತು ಶುಭಾಶಯ ಕೋರಲು ಕಾಯುತ್ತಿದ್ದರೆ ನಾನು ಕಾರಿನಲ್ಲಿ ಕುಳಿತುಕೊಳ್ಳಲು ಆಗುವುದಿಲ್ಲ ಎಂದರು.
ನಾನು ಶಹೆನ್‏ಶಾಹ್ ಅಥವಾ ಚಕ್ರವರ್ತಿ ಅಲ್ಲ, ಜನರೊಂದಿಗೆ ಬೆರೆತರೆ ಮತ್ತಷ್ಟು ಶಕ್ತಿ ಬರುತ್ತದೆ. ನಾನು ಪ್ರಯಾಣ ಮಾಡಬೇಕಾದರೆ ರಸ್ತೆಯಲ್ಲಿ ಎಲ್ಲಾ ವಯೋಮಾನದ ನೂರಾರು ಜನರನ್ನು ನೋಡುತ್ತೇನೆ. ಅವರೆಲ್ಲರೂ ನನಗೆ ಶುಭಾಶಯ ಕೋರಲು ಮತ್ತು ಸ್ವಾಗತಿಸಲು ಬಂದಿರುತ್ತಾರೆ. ಅವರ ಪ್ರೀತಿ ಮತ್ತು ಹಾರೈಕೆಯನ್ನು ನೋಡಿಯೂ ನಾನು ಕಾರಿನಲ್ಲಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ನಕ್ಸಲರಿಂದ ಜೀವ ಬೇದರಿಕೆ ಇದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಇತ್ತೀಚಿಗೆ ಗೃಹ ಸಚಿವಾಲಯ ಅವರ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದು, ಸಾರ್ವಜನಿಕ ರ್ಯಾಲಿ ನಡೆಸದಂತೆ ಪ್ರಧಾನಿಗೆ ಸಲಹೆ ನೀಡಿತ್ತು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago