Featured

ಜನರ ಆರೋಗ್ಯದ ದೃಷ್ಟಿ ಹಾಗೂ ಅವರಿಗೆ ತೊಂದರೆ ಅಗಬಾರದೆಂಬ ಉದ್ದೇಶದಿಂದ`ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ’ ತಾತ್ಕಲಿಕ ಸ್ಥಗಿತ :  ಸಿದ್ದರಾಮಯ್ಯ – Vishwanews24

ಜನರ ಆರೋಗ್ಯದ ದೃಷ್ಟಿ ಹಾಗೂ ಅವರಿಗೆ ತೊಂದರೆ ಅಗಬಾರದೆಂಬ ಉದ್ದೇಶದಿಂದ`ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ’ ತಾತ್ಕಲಿಕ ಸ್ಥಗಿತ :  ಸಿದ್ದರಾಮಯ್ಯ – Vishwanews24

ರಾಮನಗರ : ಜನರ ಆರೋಗ್ಯದ ದೃಷ್ಟಿಯಿಂದ, ಜನರಿಗೆ ತೊಂದರೆ ಅಗಬಾರದೆಂಬ ಉದ್ದೇಶದಿಂದ ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಿದ್ದೇವೆ. ಕೊರೊನಾ ವೈರಸ್ ಕಡಿಮೆಯಾದ ಬಳಿಕ ಇಲ್ಲಿಂದಲೇ ಮತ್ತೆ ಪಾದಯಾತ್ರೆ ಆರಂಭಿಸುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ನಾಯಕರು ಇಂದು ಮೇಕೆದಾಟು ಪಾದಯಾತ್ರೆ ಕುರಿತಂತೆ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಂಡಿದ್ದು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 5 ನೇ ದಿನಕ್ಕೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸಿದೆ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನಾವೆಲ್ಲ ಚರ್ಚಿಸಿ ನಿರ್ಧಾರ ತೆಗೆದುಕೊಂಡಿದ್ದೇವೆ. ಸಂಗಮದಿಂದ ರಾಮನಗರದವರೆಗೂ ಯಶಸ್ವಿಯಾಗಿ ಪಾದಯಾತ್ರೆ ಮಾಡಿದ್ದೇವೆ. ಇವತ್ತು ರಾಮನಗರದಿಂದ ಪಾದಯಾತ್ರೆ ಇತ್ತು. ರಾಜ್ಯದಲ್ಲಿ ಕೊರೊನಾ ಕೇಸ್ ಹೆಚ್ಚಾಗುತ್ತಿದೆ. ನಿನ್ನೆ 15 ಸಾವಿರ ಕ್ಕೂ ಹೆಚ್ಚು ಮಂದಿಗೆ ಕೊರೊನಾಸೋಂಕು ದೃಢಪಟ್ಟಿದೆ. ನಮಗೂ ನಮ್ಮದೇ ಆದ ಜವಾಬ್ದಾರಿ ಇದೆ ಎಂದರು.

ಕೊರೊನಾ ಹೆಚ್ಚಾಗಲು ಕಾಂಗ್ರೆಸ್ ಕಾರಣ ಅಲ್ಲ. ಕೊರೊನಾ ಹೆಚ್ಚಾಗಲು ಬಿಜೆಪಿಯೇ ಕಾರಣ, ಕೇಸ್ ಹೆಚ್ಚಾದ್ರು ಸಿಎಂ ನಡೆಸೋದು ನಿಲ್ಲಿಸಿಲ್ಲ.ಬಿಜೆಪಿಯವರು ರ್ಯಾಲಿಗಳನ್ನು ನಡೆಸಿದ್ರು. ಎಂಎಲ್ಸಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ 4 ಸಾವಿರ ಜನರನ್ನು ಸೇರಿಸಿ ಕಾರ್ಯಕ್ರಮ ಮಾಡಿದ್ರು. ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಮಾರಂಭ ಮಾಡಿದ್ದಾರೆ. ಅವರ ಮೇಲೆ ಏಕೆ ಕೇಸ್ ದಾಖಲಿಸಲಿಲ್ಲ? ಆರಗ ಜ್ಞಾನೇಂದ್ರ ಕ್ಷೇತ್ರದಲ್ಲೂ ಜಾತ್ರೆ ನಡೆದಿತ್ತು ಆದರೆ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ತಡೆಯೋದು ಸರ್ಕಾರದ ಉದ್ದೇಶವಾಗಿತ್ತು ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago