ಜನರ ಒಳಿತಿಗಾಗಿ ನಾನು ರಾಜೀನಾಮೆ ನೀಡಲು ಸಿದ್ಧ : ಮಮತಾ ಬ್ಯಾನರ್ಜಿ – vishwanews24

Featured, ರಾಷ್ಟ್ರ ನ್ಯೂಸ್

ಜನರ ಒಳಿತಿಗಾಗಿ ನಾನು ರಾಜೀನಾಮೆ ನೀಡಲು ಸಿದ್ಧ : ಮಮತಾ ಬ್ಯಾನರ್ಜಿ

ಕೋಲ್ಕತ್ತಾ : ಜನರ ಒಳಿತಾಗಿ ನಾನು ರಾಜೀನಾಮೆ ನೀಡಲು ಸಿದ್ಧ ಎಂದು ಘೋಷಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನನಗೂ ಕೂಡಾ ಆರ್ಜಿ ಕರ್ ಆಸ್ಪತ್ರೆಯಲ್ಲಿ ಹತ್ಯೆಗೀಡಾಗಿರುವ ವೈದ್ಯೆಗೆ ನ್ಯಾಯ ದೊರೆಯಬೇಕಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, “ಆರ್ಜಿ ಕರ್ ಆಸ್ಪತ್ರೆಯ ವೈದ್ಯರ ಮುಷ್ಕರ ಇಂದು ಅಂತ್ಯಗೊಳ್ಳಬಹುದು ಎಂದು ನಿರೀಕ್ಷಿಸಿದ್ದ ಪಶ್ಚಿಮ ಬಂಗಾಳ ಜನತೆಯಲ್ಲಿ ನಾನು ಕ್ಷಮೆ ಕೋರುತ್ತೇನೆ. ಕಿರಿಯ ವೈದ್ಯರು ನಬನ್ನಾಗೆ ಬಂದಿದ್ದರಾದರೂ, ಅವರು ಸಭೆಯಲ್ಲಿ ಭಾಗವಹಿಸಲಿಲ್ಲ. ಕೆಲಸಕ್ಕೆ ಮರಳುವಂತೆ ನಾನು ಅವರಲ್ಲಿ ಮನವಿ ಮಾಡಿದೆ” ಎಂದು ಹೇಳಿದರು.

ಮಲ್ಪೆ: ಗಣೇಶ ವಿಸರ್ಜನೆಯಲ್ಲಿ ಬೆಂಕಿ ಉಗುಳುವ ವೇಳೆ ಸೀಮೆಎಣ್ಣೆ ಹೊಟ್ಟೆಯೊಳಗೆ ಹೋಗಿ ವ್ಯಕ್ತಿ ಸಾವು – vishwanews24

“ನಾನು ಜನರ ಒಳಿತಿಗಾಗಿ ರಾಜೀನಾಮೆ ಸಲ್ಲಿಸಲು ಸಿದ್ಧನಿದ್ದೇನೆ. ಕಳೆದ ಮೂರು ದಿನಗಳ ನನ್ನ ಉತ್ತಮ ಉದ್ದೇಶ ಹಾಗೂ ಪ್ರಯತ್ನಗಳ ಹೊರತಾಗಿಯೂ ವೈದ್ಯರು ಮಾತುಕತೆ ನಡೆಸಲು ನಿರಾಕರಿಸಿದರು” ಎಂದು ಅವರು ತಿಳಿಸಿದರು.

ಆರ್ಜಿ ಕರ್ ಆಸ್ಪತ್ರೆಯ ಮುಷ್ಕರಕ್ಕೆ ಪರಿಹಾರ ಕಂಡುಕೊಳ್ಳಲು ಪಶ್ಚಿಮ ಬಂಗಾಳ ರಾಜ್ಯ ಕಾರ್ಯಾಲಯದೊಂದಿಗೆ ಮಾತುಕತೆ ನಡೆಸಲು ಪ್ರತಿಭಟನಾನಿರತ ವೈದ್ಯರ ಗುಂಪೊಂದು ನಬನ್ನಾ ತಲುಪಿತಾದರೂ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಮಾತುಕತೆ ನಡೆಸಬೇಕು ಎಂಬ ಪಶ್ಚಿಮ ಬಂಗಾಳ ಸರಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿತು.

ಉಡುಪಿ:  ಅನರ್ಹರು ಪಡಿತರ ಚೀಟಿಯನ್ನು ಹಿಂದಿರುಗಿಸಲು ಸೂಚನೆ – vishwanews24

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ರಾಜೀನಾಮೆ ಪ್ರಸ್ತಾವ ಮಂಡಿಸಿದ್ದಾರೆ

Leave a Reply