ಕೋಲ್ಕತ್ತಾ : ಜನರ ಒಳಿತಾಗಿ ನಾನು ರಾಜೀನಾಮೆ ನೀಡಲು ಸಿದ್ಧ ಎಂದು ಘೋಷಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನನಗೂ ಕೂಡಾ ಆರ್ಜಿ ಕರ್ ಆಸ್ಪತ್ರೆಯಲ್ಲಿ ಹತ್ಯೆಗೀಡಾಗಿರುವ ವೈದ್ಯೆಗೆ ನ್ಯಾಯ ದೊರೆಯಬೇಕಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, “ಆರ್ಜಿ ಕರ್ ಆಸ್ಪತ್ರೆಯ ವೈದ್ಯರ ಮುಷ್ಕರ ಇಂದು ಅಂತ್ಯಗೊಳ್ಳಬಹುದು ಎಂದು ನಿರೀಕ್ಷಿಸಿದ್ದ ಪಶ್ಚಿಮ ಬಂಗಾಳ ಜನತೆಯಲ್ಲಿ ನಾನು ಕ್ಷಮೆ ಕೋರುತ್ತೇನೆ. ಕಿರಿಯ ವೈದ್ಯರು ನಬನ್ನಾಗೆ ಬಂದಿದ್ದರಾದರೂ, ಅವರು ಸಭೆಯಲ್ಲಿ ಭಾಗವಹಿಸಲಿಲ್ಲ. ಕೆಲಸಕ್ಕೆ ಮರಳುವಂತೆ ನಾನು ಅವರಲ್ಲಿ ಮನವಿ ಮಾಡಿದೆ” ಎಂದು ಹೇಳಿದರು.
“ನಾನು ಜನರ ಒಳಿತಿಗಾಗಿ ರಾಜೀನಾಮೆ ಸಲ್ಲಿಸಲು ಸಿದ್ಧನಿದ್ದೇನೆ. ಕಳೆದ ಮೂರು ದಿನಗಳ ನನ್ನ ಉತ್ತಮ ಉದ್ದೇಶ ಹಾಗೂ ಪ್ರಯತ್ನಗಳ ಹೊರತಾಗಿಯೂ ವೈದ್ಯರು ಮಾತುಕತೆ ನಡೆಸಲು ನಿರಾಕರಿಸಿದರು” ಎಂದು ಅವರು ತಿಳಿಸಿದರು.
ಆರ್ಜಿ ಕರ್ ಆಸ್ಪತ್ರೆಯ ಮುಷ್ಕರಕ್ಕೆ ಪರಿಹಾರ ಕಂಡುಕೊಳ್ಳಲು ಪಶ್ಚಿಮ ಬಂಗಾಳ ರಾಜ್ಯ ಕಾರ್ಯಾಲಯದೊಂದಿಗೆ ಮಾತುಕತೆ ನಡೆಸಲು ಪ್ರತಿಭಟನಾನಿರತ ವೈದ್ಯರ ಗುಂಪೊಂದು ನಬನ್ನಾ ತಲುಪಿತಾದರೂ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಮಾತುಕತೆ ನಡೆಸಬೇಕು ಎಂಬ ಪಶ್ಚಿಮ ಬಂಗಾಳ ಸರಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿತು.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ರಾಜೀನಾಮೆ ಪ್ರಸ್ತಾವ ಮಂಡಿಸಿದ್ದಾರೆ
ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ; ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…