ಕೋಲ್ಕತ್ತಾ : ಜನರ ಒಳಿತಾಗಿ ನಾನು ರಾಜೀನಾಮೆ ನೀಡಲು ಸಿದ್ಧ ಎಂದು ಘೋಷಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನನಗೂ ಕೂಡಾ ಆರ್ಜಿ ಕರ್ ಆಸ್ಪತ್ರೆಯಲ್ಲಿ ಹತ್ಯೆಗೀಡಾಗಿರುವ ವೈದ್ಯೆಗೆ ನ್ಯಾಯ ದೊರೆಯಬೇಕಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, “ಆರ್ಜಿ ಕರ್ ಆಸ್ಪತ್ರೆಯ ವೈದ್ಯರ ಮುಷ್ಕರ ಇಂದು ಅಂತ್ಯಗೊಳ್ಳಬಹುದು ಎಂದು ನಿರೀಕ್ಷಿಸಿದ್ದ ಪಶ್ಚಿಮ ಬಂಗಾಳ ಜನತೆಯಲ್ಲಿ ನಾನು ಕ್ಷಮೆ ಕೋರುತ್ತೇನೆ. ಕಿರಿಯ ವೈದ್ಯರು ನಬನ್ನಾಗೆ ಬಂದಿದ್ದರಾದರೂ, ಅವರು ಸಭೆಯಲ್ಲಿ ಭಾಗವಹಿಸಲಿಲ್ಲ. ಕೆಲಸಕ್ಕೆ ಮರಳುವಂತೆ ನಾನು ಅವರಲ್ಲಿ ಮನವಿ ಮಾಡಿದೆ” ಎಂದು ಹೇಳಿದರು.
“ನಾನು ಜನರ ಒಳಿತಿಗಾಗಿ ರಾಜೀನಾಮೆ ಸಲ್ಲಿಸಲು ಸಿದ್ಧನಿದ್ದೇನೆ. ಕಳೆದ ಮೂರು ದಿನಗಳ ನನ್ನ ಉತ್ತಮ ಉದ್ದೇಶ ಹಾಗೂ ಪ್ರಯತ್ನಗಳ ಹೊರತಾಗಿಯೂ ವೈದ್ಯರು ಮಾತುಕತೆ ನಡೆಸಲು ನಿರಾಕರಿಸಿದರು” ಎಂದು ಅವರು ತಿಳಿಸಿದರು.
ಆರ್ಜಿ ಕರ್ ಆಸ್ಪತ್ರೆಯ ಮುಷ್ಕರಕ್ಕೆ ಪರಿಹಾರ ಕಂಡುಕೊಳ್ಳಲು ಪಶ್ಚಿಮ ಬಂಗಾಳ ರಾಜ್ಯ ಕಾರ್ಯಾಲಯದೊಂದಿಗೆ ಮಾತುಕತೆ ನಡೆಸಲು ಪ್ರತಿಭಟನಾನಿರತ ವೈದ್ಯರ ಗುಂಪೊಂದು ನಬನ್ನಾ ತಲುಪಿತಾದರೂ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಮಾತುಕತೆ ನಡೆಸಬೇಕು ಎಂಬ ಪಶ್ಚಿಮ ಬಂಗಾಳ ಸರಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿತು.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ರಾಜೀನಾಮೆ ಪ್ರಸ್ತಾವ ಮಂಡಿಸಿದ್ದಾರೆ
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…