ನವದೆಹಲಿ : ಸರ್ಕಾರದ ವಿರುದ್ಧ ಜನರಲ್ಲಿರುವ ಕೋಪವನ್ನು ಗಮನಿಸಿದರೆ, ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಈಗಾಗಲೇ ನಾವು ಗೆದ್ದಿದ್ದೇವೆ. ಆದರೆ, ಮುಖ್ಯ ಸಮಸ್ಯೆ ಏನೆಂದರೆ, ಗೆಲ್ಲಲು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಯುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
“ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ. ಕಾಂಗ್ರೆಸ್ ಎಲ್ಲಾ ವಿಷವನ್ನು ಕುಡಿಯುವ ನೀಲಿ ಕುತ್ತಿಗೆಯ (ಶಿವ)ನ ಪಾತ್ರವನ್ನು ನಿರ್ವಹಿಸುತ್ತದೆ. ಪಕ್ಷದ ಬಗ್ಗೆ ಮಿತ್ರಪಕ್ಷಗಳು ಹೊಂದಿರುವ ಯಾವುದೇ ಟೀಕೆಗಳನ್ನು ನಗುತ್ತಾ ಸ್ವೀಕರಿಸಲಾಗುತ್ತದೆ” ಎಂದು ಹೇಳಿದರು.
“ಇಂಡಿಯಾ ಒಕ್ಕೂಟದ ನಡುವೆ ಸಮನ್ವಯವಿಲ್ಲ ಎಂಬ ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ನಾಯಕರು ಬಲಿಯಾಗಬಾರದು. ಒಕ್ಕೂಟದ ಕಲ್ಪನೆಯನ್ನು ಸಮರ್ಥಿಸಲು ಎಲ್ಲರೂ ಒಟ್ಟಿಗೆ ಇರುತ್ತೇವೆ. ಇದರಲ್ಲಿ ಡಿಎಂಕೆ ಕೂಡ ಒಳಗೊಂಡಿರುತ್ತದೆ” ಎಂದರು.
“ಇಂಡಿಯಾದಲ್ಲಿ ಒಗ್ಗಟ್ಟಿಲ್ಲ ಎಂದು ಬಿಜೆಪಿ ಬಿಂಬಿಸುತ್ತಿದೆ. ಇದು ಸತ್ಯವಲ್ಲ. ರಾಷ್ಟ್ರೀಯ ಮಟ್ಟದಲ್ಲಿ ಜೊತೆಗಿದ್ದರೂ ಕೂಡ ಕೆಲವು ಪಕ್ಷಗಳ ಜೊತೆಗೆ ಭಿನ್ನಾಭಿಪ್ರಾಯ ಹೊಂದಿದ್ದೇವೆ. ಕೇರಳದಲ್ಲಿ ನಾವು ಪಿಣರಾಯಿ ವಿಜಯನ್ ಅವರನ್ನು ಕಟುವಾಗಿ ಟೀಕಿಸಿದ್ದೆವು. ನೀವು ಹೋಗಿ ಅವರನ್ನು ಆಲಂಗಿಸಿಕೊಳ್ಳಿ ಎಂದರೆ ಅದು ಸಾಧ್ಯವಿಲ್ಲ. ನಾವು ಅವರ ಜೊತೆ ರಾಜಕೀಯವಾಗಿ ಹೋರಾಟ ನಡೆಸುತ್ತಿದ್ದೇವೆ” ಎಂದು ವಿವರಿಸಿದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…