ನವದೆಹಲಿ : ಸರ್ಕಾರದ ವಿರುದ್ಧ ಜನರಲ್ಲಿರುವ ಕೋಪವನ್ನು ಗಮನಿಸಿದರೆ, ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಈಗಾಗಲೇ ನಾವು ಗೆದ್ದಿದ್ದೇವೆ. ಆದರೆ, ಮುಖ್ಯ ಸಮಸ್ಯೆ ಏನೆಂದರೆ, ಗೆಲ್ಲಲು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಯುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
“ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ. ಕಾಂಗ್ರೆಸ್ ಎಲ್ಲಾ ವಿಷವನ್ನು ಕುಡಿಯುವ ನೀಲಿ ಕುತ್ತಿಗೆಯ (ಶಿವ)ನ ಪಾತ್ರವನ್ನು ನಿರ್ವಹಿಸುತ್ತದೆ. ಪಕ್ಷದ ಬಗ್ಗೆ ಮಿತ್ರಪಕ್ಷಗಳು ಹೊಂದಿರುವ ಯಾವುದೇ ಟೀಕೆಗಳನ್ನು ನಗುತ್ತಾ ಸ್ವೀಕರಿಸಲಾಗುತ್ತದೆ” ಎಂದು ಹೇಳಿದರು.
“ಇಂಡಿಯಾ ಒಕ್ಕೂಟದ ನಡುವೆ ಸಮನ್ವಯವಿಲ್ಲ ಎಂಬ ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ನಾಯಕರು ಬಲಿಯಾಗಬಾರದು. ಒಕ್ಕೂಟದ ಕಲ್ಪನೆಯನ್ನು ಸಮರ್ಥಿಸಲು ಎಲ್ಲರೂ ಒಟ್ಟಿಗೆ ಇರುತ್ತೇವೆ. ಇದರಲ್ಲಿ ಡಿಎಂಕೆ ಕೂಡ ಒಳಗೊಂಡಿರುತ್ತದೆ” ಎಂದರು.
“ಇಂಡಿಯಾದಲ್ಲಿ ಒಗ್ಗಟ್ಟಿಲ್ಲ ಎಂದು ಬಿಜೆಪಿ ಬಿಂಬಿಸುತ್ತಿದೆ. ಇದು ಸತ್ಯವಲ್ಲ. ರಾಷ್ಟ್ರೀಯ ಮಟ್ಟದಲ್ಲಿ ಜೊತೆಗಿದ್ದರೂ ಕೂಡ ಕೆಲವು ಪಕ್ಷಗಳ ಜೊತೆಗೆ ಭಿನ್ನಾಭಿಪ್ರಾಯ ಹೊಂದಿದ್ದೇವೆ. ಕೇರಳದಲ್ಲಿ ನಾವು ಪಿಣರಾಯಿ ವಿಜಯನ್ ಅವರನ್ನು ಕಟುವಾಗಿ ಟೀಕಿಸಿದ್ದೆವು. ನೀವು ಹೋಗಿ ಅವರನ್ನು ಆಲಂಗಿಸಿಕೊಳ್ಳಿ ಎಂದರೆ ಅದು ಸಾಧ್ಯವಿಲ್ಲ. ನಾವು ಅವರ ಜೊತೆ ರಾಜಕೀಯವಾಗಿ ಹೋರಾಟ ನಡೆಸುತ್ತಿದ್ದೇವೆ” ಎಂದು ವಿವರಿಸಿದರು.
ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…
ಪೆಟ್ರೋಲ್, ಗ್ಯಾಸ್ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…
ಧರ್ಮಸ್ಥಳ ಬುರುಡೆ ಕೇಸ್: ನಟ ಪ್ರಕಾಶ್ ರಾಜ್ ವಿರುದ್ಧ ವಿಶೇಷ ತನಿಖೆ ಆಗಲಿ: ಪ್ರಮೋದ್ ಮುತಾಲಿಕ್ ಆಗ್ರಹ ಬೆಳಗಾವಿ: ಧರ್ಮಸ್ಥಳ…
ಬಂಟ್ವಾಳ: ಯುವತಿ ನಾಪತ್ತೆ ಬಂಟ್ವಾಳ: ತಂದೆ, ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಮನೆಯಿಂದ ಮಗಳು ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ…
ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತರಿಗೆ ಉತ್ತಮ ಅವಕಾಶ ಖಚಿತ : ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ…
ಜುಲೈ 11ರಂದು ಕಾಪು ತಾಲೂಕು ಕೃಷಿಕ ಸಮಾಜದ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಅವಕಾಶ ಉಡುಪಿ : ಕರ್ನಾಟಕ ಪ್ರದೇಶ ಕೃಷಿಕ…