Featured

ಜನರ ದೃಷ್ಟಿಯಿಂದ ಪಾದಯಾತ್ರೆ ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆ , ಮೇಕೆದಾಟು ಯೋಜನೆ ಪರ ನಮ್ಮ ಹೋರಾಟ ಈಡೇರುವವರೆಗೆ ಮುಂದುವರಿಯುತ್ತದೆ : ಡಿ ಕೆ ಶಿ – VIshwanews24

ಜನರ ದೃಷ್ಟಿಯಿಂದ ಪಾದಯಾತ್ರೆ ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆ , ಮೇಕೆದಾಟು ಯೋಜನೆ ಪರ ನಮ್ಮ ಹೋರಾಟ ಈಡೇರುವವರೆಗೆ ಮುಂದುವರಿಯುತ್ತದೆ : ಡಿ ಕೆ ಶಿ – VIshwanews24

ರಾಮನಗರ: ಕಾವೇರಿ ನೀರಿಗಾಗಿ ನಮ್ಮ ಹೋರಾಟ ಮುಂದುವರಿಸುತ್ತೇವೆ, ಕೋವಿಡ್ ಮೂರನೇ ಅಲೆ ಹೆಚ್ಚಳ ಹಿನ್ನೆಲೆಯಲ್ಲಿ ಪಾದಯಾತ್ರೆಗೆ ತಾತ್ಕಾಲಿಕ ಸ್ಥಗಿತ ನೀಡುತ್ತಿದ್ದೇವಷ್ಟೆ, ಮುಂದಿನ ದಿನಗಳಲ್ಲಿ ರಾಮನಗರದಿಂದಲೇ ಪಾದಯಾತ್ರೆ ಪುನರಾರಂಭಿಸುತ್ತೇವೆ, ಹಾಗೂ ಪಾದಯಾತ್ರೆ ಅಂತ್ಯ ಮಾಡಲು ನಿರ್ಧರಿಸಿದ ಸ್ಥಳದಲ್ಲಿಯೇ ಕೊನೆಗೊಳಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ನಾಯಕರ ಜೊತೆ ಚರ್ಚೆ ನಡೆಸಿ ಸಿದ್ದರಾಮಯ್ಯ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯದ ಜನರೇ ನಮಗೆ ಮುಖ್ಯ, ಅವರ ಹಿತದೃಷ್ಟಿಯಿಂದ ಪಾದಯಾತ್ರೆಗೆ ತಾತ್ಕಾಲಿಕ ವಿರಾಮ ಹಾಕುತ್ತಿದ್ದೇವೆ ಹೊರತು ರಾಜ್ಯ ಸರ್ಕಾರದ ಕೇಸಿಗೆ ಹೆದರಿ ಅಲ್ಲ, ಜನತೆಗೆ ತಪ್ಪು ಸಂದೇಶ ಹೋಗಬಾರದು ಎಂಬುದು ನಮ್ಮ ಉದ್ದೇಶ ಎಂದರು.

ಕಾಂಗ್ರೆಸ್ ಹಳೆಯ ರಾಷ್ಟ್ರೀಯ ಪಕ್ಷವಾಗಿದ್ದು ಯಾವತ್ತಿಗೂ ಜನತೆಗೆ ಪರವಾಗಿ ನಿಂತಿದೆ, ಇನ್ನು ಮುಂದೆಯೂ ನಿಲ್ಲುತ್ತದೆ. ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ನಮಗೂ ಜವಾಬ್ದಾರಿಯಿದೆ. ನಾಡು-ನುಡಿ, ಜಲ, ನೆಲದ ರಕ್ಷಣೆಯ ವಿಚಾರ ಬಂದಾಗ ಕಾಂಗ್ರೆಸ್ ಪಕ್ಷ ಹೋರಾಟದಲ್ಲಿ ಯಾವತ್ತಿಗೂ ಮುಂಚೂಣಿಯಲ್ಲಿರುತ್ತದೆ. ಹೋರಾಟ ಎಂಬುದು ಕಾಂಗ್ರೆಸ್ ಪಕ್ಷದ ರಕ್ತದಲ್ಲಿಯೇ ಇದೆ, ಇಂದು ತಾತ್ಕಾಲಿಕ ಸ್ಥಗಿತ ನೀಡಿದ್ದೆ ಹೊರತು ಮೇಕೆದಾಟು ಯೋಜನೆ ಪರ ನಮ್ಮ ಹೋರಾಟ ಈಡೇರುವವರೆಗೆ ಮುಂದುವರಿಯುತ್ತದೆ ಎಂದರು.

ಬಿಜೆಪಿಯವರು ಪಕ್ಷಪಾತಿಗಳಂತೆ ವರ್ತಿಸಬಾರದು. ಕೊರೋನಾ ಮೂರನೇ ಅಲೆ ಆರಂಭವಾಗಿದ್ದರೂ ಬಿಜೆಪಿಯವರ ಸಭೆ-ಸಮಾರಂಭ, ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಿರಲಿಲ್ಲ. ಆಗಲೇ ನಿರ್ಬಂಧ ಹೇರಿದ್ದರೆ 3ನೇ ಅಲೆ ಇಷ್ಟೊಂದು ಹರಡುವ ಸಾಧ್ಯತೆಯಿತ್ತೇ ಎಂದು ಪ್ರಶ್ನಿಸಿದರು.

ಮೂರು ದಿನ ಮೌನ ಎಂದಿದ್ದೇ. ವಿಧಿಯಿಲ್ಲದೇ ಇಂದು ಮೌನ ಮುರಿಯುತ್ತಿದ್ದೇನೆ. ಕೊರೊನಾ ಸೋಂಕಿತ ಡಿಸಿಯ ನೋಟಿಸ್​ ನೀಡಲು ಬಂದಿದ್ದರು. ರಾಮನಗರ ಎಸಿ, ಡಿವೈಎಸ್​ಪಿ ನೋಟಿಸ್ ನೀಡಲು ಬಂದಿದ್ದರು. ಕೊರೊನಾ ಹಿನ್ನೆಲೆ ಡಿಸಿ ಮನೆಯಿಂದ ಹೊರಬಂದಿರಲಿಲ್ಲ. ಆದರೆ ಸೋಂಕಿತ ಡಿಸಿ ಸಹಿಯುಳ್ಳ ನೋಟಿಸ್​ ನೀಡಿದ್ದಾರೆ.

ನಿಮ್ಮ ಹೋರಾಟದ ವೇಳೆ ಜನರಿಗೆ ಸಮಸ್ಯೆ ಆಗಬಾರದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪಾದಯಾತ್ರೆ ಸಾಗುತ್ತೆ. ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ರಸ್ತೆ ಬದಿ ನಡೆಯಿರಿ ಎಂದು ಡಿಸಿ ನೋಟಿಸ್​ ಉಲ್ಲೇಖವಾಗಿದ್ದ ಅಂಶಗಳ ಬಗ್ಗೆ ಕೂಡ ಇಂದು ಸುದ್ದಿಗೋಷ್ಠಿಯಲ್ಲಿ ಡಿ ಕೆ ಶಿವಕುಮಾರ್ ಮಾಹಿತಿ ನೀಡಿದರು. ಮತ್ತೊಂದೆಡೆ ಎಸ್​ಪಿಗೆ ಸೂಚಿಸಿದ್ದ ಜಿಲ್ಲಾಧಿಕಾರಿ ಪಾದಯಾತ್ರೆಗೆ ಬೇಕಾದ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದರು ಎಂದು ಕೂಡ ತಿಳಿಸಿದರು.

ಜನರ ದೃಷ್ಟಿಯಿಂದ ಪಾದಯಾತ್ರೆ ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆ. ಮತ್ತೆ ಇಲ್ಲಿಂದಲೇ ಪಾದಯಾತ್ರೆ ಪುನಾರಂಭ ಮಾಡುತ್ತೇವೆ. ಬೇಸರ ಅನ್ನೋದಕ್ಕಿಂತ ಜನರ ದೃಷ್ಟಿಯಿಂದ ಸ್ಥಗಿತಗೊಳಿಸಿದ್ದೇವೆ. ಶಾಸಕರು, ಕಾರ್ಯಕರ್ತರು ಪಾದಯಾತ್ರೆ ಯಶಸ್ವಿಗೊಳಿಸಿದ್ದಾರೆ ಎಂದು ಸಂಸದ ಡಿ ಕೆ ಸುರೇಶ್ ಹೇಳಿದ್ದಾರೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

7 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

13 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

15 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

15 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

16 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

16 hours ago