ಬೆಂಗಳೂರು : ಜನರ ವಿಶ್ವಾಸವಿಲ್ಲದ ಈ ಸರ್ಕಾರಕ್ಕೆ ಆಯಸ್ಸು ಇಲ್ಲ. ಈ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ ರೈತರ ಸಾಲ ಸಂಪೂರ್ಣ ಮನ್ನಾ ಮಾಡದಿದ್ದರೆ ಅಧಿಕಾರಕ್ಕಾಗಿ ಅಪವಿತ್ರ ಮೈತ್ರಿ ಮಾಡಿಕೊಂಡ ಸರ್ಕಾರದ ಮರ್ಯಾದೆ ಹರಾಜು ಹಾಕುತ್ತೇವೆ ಎಂದು ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಗುಡುಗಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಬಿಎಸ್ ವೈ, ಚುನಾವಣಾ ನೀತಿ ಸಂಹಿತೆ ಜಾರಿಯಾದ ಮಾ. 28 ರಿಂದ ಸ್ಥಗಿತಗೊಂಡಿದ್ದ ಅಭಿವೃದ್ಧಿ ಕೆಲಸಗಳು ಪುನಾರಂಭ ಆಗಿಲ್ಲ. ಕಳೆದ ಮೂರುವರೆ ತಿಂಗಳಿಂದ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸ್ತಬ್ದಗೊಂಡಿದೆ. ಅಧಿವೇಶನ ಅಂತ್ಯಗೊಳ್ಳುವ ಜು. 12 ರ ಬಳಿಕ ಪ್ರತಿಪಕ್ಷದ ಎಲ್ಲ 104 ಶಾಸಕರು ಜನರ ಮುಂದೆ ಹೋಗಿ ಸರ್ಕಾರದ ಮಾನ ಹರಾಜು ಹಾಕುತ್ತೇವೆ ಎಂದು ವಾಗ್ದಾಳಿ ನಡೆಸಿದರು.
37 ಶಾಸಕರ ಬಲವಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಆಗಿರುವುದು ಪ್ರಜಾತಂತ್ರ ವ್ಯವಸ್ಥೆಯ ಕಗ್ಗೊಲೆ.ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಬೇಕು ಎಂಬ ಕಾರಣ ನೀಡಿ ಕಾಂಗ್ರೆಸ್ ನವರು ಜೆಡಿಎಸ್ ವರಿಷ್ಠರ ಕಾಲಿಗೆ ಬಿದ್ದು ಸರ್ಕಾರ ಮಾಡಿದ್ದು ದುರಂತ ಎಂದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…