Featured

ಜನರ ಸೇವೆಗೆ ಮತ್ತು ಅವರ ರಕ್ಷಣೆಗೆ ಜೈಲಿಗೆ ಹೋಗಲು ಸಿದ್ಧ , ಈ ಬೆದರಿಕೆ ತಂತ್ರಗಳಿಗೆ ನಾನು ಬೆದರುವುದಿಲ್ಲ : ಶಾಸಕ ಹರೀಶ್ ಪೂಂಜಾ – Vishwanews24

ಬಡವರಿಗಾಗಿ ಇಂತಹ ನೂರು ಕೇಸು ಹಾಕಿಸಿಕೊಳ್ಳುವುದಕ್ಕೂ ಸಿದ್ಧ, ಜೈಲು ಸೇರಲೂ ತಯಾರಿದ್ದೇನೆ  :  ಶಾಸಕ ಹರೀಶ್ ಪೂಂಜಾ ಆಕ್ರೋಶ

ದಕ್ಷಿಣಕನ್ನಡ : ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳತಂಗಡಿ ತಾಲೂಕಿನಲ್ಲಿ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ಮಾಡಲು ಪ್ರೀತಿಸುತ್ತಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಅದನ್ನು ತಡಿದಾಗ ಶಾಸಕ ಹರೀಶ್ ಪೂಂಜಾ ಅವರು ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಎಫ್ ಐ ಆರ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಶಾಸಕ ಹರೀಶ್ ಪೂಂಜ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹಾಗೂ ಅರಣ್ಯ ಸಚಿವರು ನಿಮ್ಮ ಈ ಗಂಡುಬಿದರಿಕೆಗಳಿಗೆಲ್ಲ ನಾನು ಹೆದರುವುದಿಲ್ಲ ಎಂದು ಫೇಸ್ಬುಕ್ ನಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ನೋಡೇ ಬಿಡೋಣ. ನಾನು ಶಾಸಕನಾಗಿರುವುದು ನನ್ನ ಜನರ ಸೇವೆಗೆ ಮತ್ತು ಅವರ ರಕ್ಷಣೆಗೆ ಜೈಲಿಗೆ ಹೋಗಲು ಸಿದ್ಧ. ಬಾಲ್ಯದಿಂದಲೂ ಸುಭಾಷ್ ಚಂದ್ರ ಬೋಸ್ , ಸರ್ದಾರ್ ಪಟೇಲ್, ವೀರ ಸಾವರ್ಕರ್, ಭಗತ್ ಸಿಂಗ್ ಮುಂತಾದವರನ್ನು ಆದರ್ಶವಾಗಿ ಇಟ್ಟುಕೊಂಡು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ABVP) ದಿನಗಳಿಂದ ಜನ ಸೇವೆ, ಜನರಿಗಾಗಿ ಸಂಘರ್ಷ ಮಾಡಿಕೊಂಡು ನಾಯಕನಾದವನು. ನಾನು ಜನರಿಂದ ಶಾಸಕನಾಗಿ ಜನರಿಗೋಸ್ಕರ ಇರುವವನು ಅದಕ್ಕಾಗಿ ಯಾವ ಬೆಲೆ ತೆರಲು ಸಿದ್ದ.

ನನ್ನ ವಿಧಾನಸಭಾ ಕ್ಷೇತ್ರದಲ್ಲಿ, ಅರಣ್ಯದ ಅಂಚಿನಲ್ಲಿ, ನೂರು ವರ್ಷಕ್ಕಿಂತಲೂ ಹಿಂದಿನಿಂದ ಕೃಷಿ ಚಟುವಟಿಕೆ ಮಾಡುತ್ತಾ ಬಂದಿದ್ದ ಕಳೆಂಜದ ದೇವಣ್ಣ ಗೌಡ ಅವರ ಕುಟುಂಬವನ್ನು ಒಕ್ಕಲೆಬ್ಬಿಸಲು ಯತ್ನಿಸಿದ ಅರಣ್ಯ ಇಲಾಖೆಯ ವಿರುದ್ಧ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಶಾಸಕ ಮಿತ್ರರೊಂದಿಗೆ ಮತ್ತು ಕಾರ್ಯಕರ್ತರೊಂದಿಗೆ ಸೇರಿ ಪ್ರತಿಭಟಿಸಿ ಬಡ ಕುಟುಂಬವನ್ನು ಒಕ್ಕಲೆಬ್ಬಿಸುವುದರಿಂದ ತಡೆದಿದ್ದೇವು.

ನೂರಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿದ್ದ ಮನೆಯವರ ಪರವಾಗಿ ನಾನೊಬ್ಬ ಜನಪ್ರತಿನಿಧಿಯಾಗಿ ಧ್ವನಿ ಎತ್ತಿದ್ದು ತಪ್ಪಾಯಿತೇ? ನನ್ನ ಕ್ಷೇತ್ರದ ಜನರ ಪರವಾಗಿ ಹೋರಾಡುವ ಹಕ್ಕು ನನಗಿಲ್ಲವೇ? ನನ್ನ ಜನ ನನ್ನಲ್ಲಿ ಸಮಸ್ಯೆ ಹೇಳಿಕೊಂಡಾಗ ಸುಮ್ಮನಿರಬೇಕೆ? ಹೀಗಾದರೆ ಸಾಮಾನ್ಯ ಜನರ ಗತಿಯೇನು? ಜನರ ಸಮಸ್ಯೆಗೆ ಧ್ವನಿಯಾದ ಒಬ್ಬ ಜನಪ್ರತಿನಿಧಿಯನ್ನು ಹೀಗೆಲ್ಲ ಕಾಡುವುದಾದರೆ ಜನಸಾಮಾನ್ಯರು ಕಾಂಗ್ರೆಸ್‌ ಸರ್ಕಾರದಡಿಯಲ್ಲಿ ಹೇಗೆ ಬದುಕಬೇಕು?

ಮಾನ್ಯ ಮುಖ್ಯಮಂತ್ರಿಗಳೇ, ಅರಣ್ಯ ಸಚಿವರೇ ನಿಮ್ಮ ಈ ಬೆದರಿಕೆ ತಂತ್ರಗಳಿಗೆ ನಾನು ಬೆದರುವುದಿಲ್ಲ. ಮತ್ತೆ ಹೇಳುತ್ತಿದ್ದೇನೆ ಬಡವರಿಗಾಗಿ ಇಂತಹ ನೂರು ಕೇಸು ಹಾಕಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ, ಜೈಲು ಸೇರಲೂ ತಯಾರಿದ್ದೇನೆ ಎಂದು ಕಿಡಿ ಕಾರಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

3 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

3 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago