Featured

ಜನರ ಸೇವೆಯೇ ನಿಜವಾದ ರಾಮ ರಾಜ್ಯ : ಯೋಗಿ ಆದಿತ್ಯನಾಥ್ – Vishwanews24

ಜನರ ಸೇವೆಯೇ ನಿಜವಾದ ರಾಮ ರಾಜ್ಯ : ಯೋಗಿ ಆದಿತ್ಯನಾಥ್ – Vishwanews24

ಲಕ್ನೋ: ಸರ್ಕಾರ ರಚನೆಗೂ ಮೊದಲು 2017ರಲ್ಲಿ ಬಿಜೆಪಿ ನೀಡಿದ ಭರವಸೆಗಳನ್ನು ಈಡೇರಿಸಿದೆ. ಏಕೆಂದರೆ ನಾವು ಜನರ ಸೇವೆಯೇ ನಿಜವಾದ ರಾಮ ರಾಜ್ಯ ಅಂತ ಪರಿಗಣಿಸಿದ್ದೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಭಾನುವಾರ ಮಥುರಾದಿಂದ ಜನ್ ವಿಶ್ವಾಸ್ ಯಾತ್ರೆಗೆ ಚಾಲನೆ ನಿಡಿದ ಅವರು, ಕಳೆದ ನಾಲ್ಕೂವರೆ ವರ್ಷಗಳಲ್ಲಿ ಸಮಾಜದ ಪ್ರತಿಯೊಂದು ವರ್ಗದ ಅಗಾಧ ಅಭಿವೃದ್ಧಿಗೆ ಬಿಜೆಪಿಯ ತುಷ್ಟೀಕರಣ ನೀತಿಯೇ ಕಾರಣ. ಬಡವರಿಗೆ 5 ಲಕ್ಷ ರೂ.ವರೆಗೆ ಉಚಿತ ವಸತಿ, ಶೌಚಾಲಯಗಳು ಮತ್ತು ವಿಮಾ ರಕ್ಷಣೆಯನ್ನು ಒದಗಿಸುವ ಕಾರ್ಯವೇ ನಿಜವಾದ ರಾಮರಾಜ್ಯವಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಗರಾಜ್‍ನಲ್ಲಿ ಕಾರ್ಮಿಕರ ಪಾದಗಳನ್ನು ತೊಳೆದರು, ಕಾಶಿಯಲ್ಲಿ ಕಾರ್ಮಿಕರ ಮೇಲೆ ಗುಲಾಬಿ ಹೂವನ್ನು ಸುರಿಸಿದರು ಮತ್ತು ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ದೇವರಿಗೆ ನಮನ ಸಲ್ಲಿಸಿದ್ದು, ಐತಿಹಾಸಿಕ ಘಟನೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಮಥುರಾ, ವೃಂದಾವನ, ಗೋವರ್ಧನ್, ನಂದಗಾಂವ್, ಬರ್ಸಾನಾ, ಗೋಕುಲ್ ಮತ್ತು ಬಲ್ದಿಯೊಗೆ ರಾಮಮಂದಿರ ನಿರ್ಮಾಣ ಸೇರಿದಂತೆ ವಿವಿಧ ತೀರ್ಥಕ್ಷೇತ್ರಗಳ ಅಭಿವೃದ್ಧಿಗೆ ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ ಅಥವಾ ಕಾಂಗ್ರೆಸ್ ಪಕ್ಷ ವಿಶೇವಾದ ಸ್ಥಾನಮಾನ ನೀಡುತ್ತದೆಯೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ

ಕೋವಿಡ್-19 ಸಮಯದಲ್ಲಿ ಕೂಡ ಅಯೋಧ್ಯೆ ಮತ್ತು ಕಾಶಿ ವಿಶ್ವನಾಥ ಕಾರಿಡಾರ್, ಬಡವರಿಗೆ ಉಚಿತ ಪಡಿತರವನ್ನು ವಿಸ್ತರಣೆ ಹೀಗೆ ಹಲವಾರು ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿತು. ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಡಾ.ಶ್ಯಾಮ ಪ್ರಸಾದ್ ಮುಖರ್ಜಿಯವರ ಒಂದು ದೇಶ, ಒಂದು ಧ್ವಜ ಮತ್ತು ಒಂದು ಸಂವಿಧಾನದ ಕನಸನ್ನು ನನಸುಗೊಳಿಸಿದ್ದಾರೆ ಎಂದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

12 minutes ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 hour ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 hour ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 hours ago