Featured

ಜನರ ಹೊಟ್ಟೆಗೆ‌ ಗತಿಯಿಲ್ಲದ ಸ್ಥಿತಿ ಬಂದರೆ‌ ಶ್ರೀಲಂಕಾದ ದುರಂತ ಭಾರತದಲ್ಲೂ ಆಗಬಹುದು ; ಇದಪ್ಪಾ ಅಚ್ಚೇದಿನ್ : ದಿನೇಶ್ ಗುಂಡುರಾವ್ – Vishwanews24

ಜನರ ಹೊಟ್ಟೆಗೆ‌ ಗತಿಯಿಲ್ಲದ ಸ್ಥಿತಿ ಬಂದರೆ‌ ಶ್ರೀಲಂಕಾದ ದುರಂತ ಭಾರತದಲ್ಲೂ ಆಗಬಹುದು ; ಇದಪ್ಪಾ ಅಚ್ಚೇದಿನ್ : ದಿನೇಶ್ ಗುಂಡುರಾವ್ – Vishwanews24

ಬೆಂಗಳೂರು: ಧರ್ಮ ಜನರ ಹೊಟ್ಟೆ ತುಂಬಿಸುವುದಿಲ್ಲ.‌ ಜನರ ಹೊಟ್ಟೆಗೆ‌ ಗತಿಯಿಲ್ಲದ ಸ್ಥಿತಿ ಬಂದರೆ‌ ಶ್ರೀಲಂಕಾದ ದುರಂತ ಭಾರತದಲ್ಲೂ ಆಗಬಹುದು ಬೆಲೆ ಏರಿಕೆ ಕುರಿತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆತ್ತಿಕೊಂಡಿರುವ ಕಾಂಗ್ರೆಸ್ ನಾಯಕ ಇದಪ್ಪಾ ಅಚ್ಚೇದಿನ್ ಎಂದು ದಿನೇಶ್ ಗುಂಡುರಾವ್ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವವ ಅವರು, “ಧರ್ಮ ಜನರ ಹೊಟ್ಟೆ ತುಂಬಿಸುವುದಿಲ್ಲ.‌ ಜನರ ಹೊಟ್ಟೆಗೆ‌ ಗತಿಯಿಲ್ಲದ ಸ್ಥಿತಿ ಬಂದರೆ‌ ಶ್ರೀಲಂಕಾದ ದುರಂತ ಭಾರತದಲ್ಲೂ ಆಗಬಹುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಮೋದಿಯವರ ಆಡಳಿತದಲ್ಲಿ ಹಣದುಬ್ಬರ 7.79 ಕ್ಕೆ ಏರಿ 8 ವರ್ಷದಲ್ಲಿ ಗರಿಷ್ಠ ಸಾಧನೆ ಮಾಡಿದೆ.ಹಸಿವಿನ ಸೂಚ್ಯಂಕದಲ್ಲಿ ಭಾರತಕ್ಕೆ 101ನೇ ಸ್ಥಾನ. ಬಡತನ ಸೂಚ್ಯಂಕದಲ್ಲಿ 66 ನೇ ಸ್ಥಾನ. ನಿರುದ್ಯೋಗದ ದರ 7.83% ಏರಿಕೆ. ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ.‌ ಪೆಟ್ರೋಲ್ 113,ಡೀಸೆಲ್ 96.ಅಡುಗೆ ಎಣ್ಣೆ ₹85 ಗಳಿಂದ ₹205. ಇದಪ್ಪಾ ಅಚ್ಚೇದಿನ್ ಎಂದು ಲೇವಡಿ ಮಾಡಿದ್ದಾರೆ.

8 ವರ್ಷಗಳ ಹಿಂದೆ ಸಿಲಿಂಡರ್ ಬೆಲೆ 400 ಇದ್ದಾಗ ‘ದುಬಾರಿ ಕಾಂಗ್ರೆಸ್ ಸಾಕು-ಜನಪರ ಬಿಜೆಪಿ ಬೇಕು’ ಎಂದು ಬಿಜೆಪಿಯವರು ಬೀದಿ ಬೀದಿಯಲ್ಲಿ ಬ್ಯಾನರ್ ಹಾಕಿದ್ದರು. ಈಗ ಸಿಲಿಂಡರ್ ₹1000 ದಾಟಿದೆ. ಅಕ್ಕಿ,ಗೋದಿ ಹಿಟ್ಟು,ಸಾಬೂನು, ಟೂಥ್‌ಪೇಸ್ಟ್ ಜನರ ಕೈಗೆಟುಕದಂತಾಗಿದೆ. ಈಗ ಬಿಜೆಪಿಯವರಿಗೆ ‘ದುಬಾರಿ BJP ಸಾಕು’ ಎಂದು ಬ್ಯಾನರ್ ಹಾಕಿಸುವ ಧಮ್ ಇದೆಯೆ? ಎಂದು ಸವಾಲ್ ಹಾಕಿದ್ದಾರೆ

ಆರ್ಥಿಕ ಶಿಸ್ತಿಲ್ಲದ ಮೋದಿಯವರ ಆಡಳಿತದಿಂದ‌ ದೇಶದ ಸಾಮಾನ್ಯ ವರ್ಗ ಬದುಕಲು ಹೋರಾಟ ನಡೆಸಬೇಕಾಗಿದೆ. ಮೋದಿಯವರು ದೇಶದ ನೈಜ ಸಮಸ್ಯೆಗಳನ್ನು ಮರೆಮಾಚಲು ಧರ್ಮ‌ ದೇವರು ಎಂಬ ಅಸ್ತ್ರ ಪ್ರಯೋಗಿಸುತ್ತಿದ್ದಾರೆ.‌ ಆದರೆ ಧರ್ಮ ಜನರ ಹೊಟ್ಟೆ ತುಂಬಿಸುವುದಿಲ್ಲ.‌ ಜನರ ಹೊಟ್ಟೆಗೆ‌ ಗತಿಯಿಲ್ಲದ ಸ್ಥಿತಿ ಬಂದರೆ‌ ಶ್ರೀಲಂಕಾದ ದುರಂತ ಭಾರತದಲ್ಲೂ ಆಗಬಹುದು ಎಂದು ಹೇಳಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

14 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

14 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

14 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

15 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago