Featured

ಜನವರಿಯಿಂದ ಕರಾವಳಿ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕುಚಲಕ್ಕಿ ಲಭ್ಯ – Vishwanews24

ಜನವರಿಯಿಂದ ಕರಾವಳಿ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕುಚಲಕ್ಕಿ ಲಭ್ಯ

ಬೆಂಗಳೂರು: ಬೆಂಬಲ ಬೆಲೆಯಡಿ ಕುಚಲಕ್ಕಿ ಖರೀದಿಗೆ ರಾಜ್ಯ ಸರಕಾರ ತೀರ್ಮಾನಿಸಿದ್ದು, ಜನವರಿಯಿಂದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪಡಿತರದಲ್ಲಿ ಲಭ್ಯವಾಗಲಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿಯ ಮೂರೂ ಜಿಲ್ಲೆಗಳ 6.20 ಲಕ್ಷ ಪಡಿತರ ಚೀಟಿದಾರರಿಗೆ ಜನವರಿಯಿಂದ ಕೆಂಪು ಕುಚಲಕ್ಕಿಯನ್ನು ವಿತರಿಸಲಾಗುವುದು. ಎರಡು ಕೆ.ಜಿ. ಸಾಮಾನ್ಯ ಅಕ್ಕಿ, ಮೂರು ಕೆ.ಜಿ. ಕುಚಲಕ್ಕಿ ನೀಡಲಾಗುತ್ತದೆ ಎಂದರು.

ಬೆಂಗಳೂರು : ದ.ಭಾರತದ ಮೊಟ್ಟ ಮೊದಲ ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ – Vishwanews24

ಕುಚಲಕ್ಕಿಯನ್ನು ಪಡಿತರ ಮೂಲಕ ಪೂರೈಸಬೇಕೆಂದು ಮೂರೂ ಜಿಲ್ಲೆಗಳ ಜನರು ಆಗ್ರಹಿಸಿದ್ದು, ಇದಕ್ಕೆ ಈಗ ಮುಖ್ಯಮಂತ್ರಿ ಒಪ್ಪಿದ್ದಾರೆ ಎಂದರು.

ಡಿಸೆಂಬರ್‌ನಲ್ಲಿ ಕುಚಲಕ್ಕಿ ಭತ್ತ (ಜಯ, ಎಂಒ4, ಅಭಿಲಾಷಾ, ಜ್ಯೋತಿ ತಳಿ) ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತದೆ. ಅದಕ್ಕೆ ಹೆಚ್ಚುವರಿ ಮೊತ್ತ ಕೊಡಲು ರಾಜ್ಯ ಸರಕಾರ ಸಮ್ಮತಿಸಿದೆ ಎಂದರು.

ಈಗ ಕೇಂದ್ರ ಸರಕಾರ ಭತ್ತಕ್ಕೆ ಬೆಂಬಲ ಬೆಲೆಗೆ ಪ್ರತಿ ಕ್ವಿಂಟಾಲ…ಗೆ 2,040 ರೂ. ಕೊಡುತ್ತಿದೆ. ನಾವು ಕುಚಲಕ್ಕಿ ಭತ್ತಕ್ಕೆ 500 ರೂ. ಹೆಚ್ಚುವರಿಯಾಗಿ ಸೇರಿಸಿ ಒಟ್ಟು 2,540 ರೂ. ಬೆಲೆಗೆ ಖರೀದಿಸುತ್ತೇವೆ. 13 ಲಕ್ಷ ಕ್ವಿಂಟಾಲ… ಭತ್ತ ಖರೀದಿಯ ಗುರಿ ಇದೆ. ಇದಕ್ಕೆ 132 ಕೋಟಿ ರೂ.ವೆಚ್ಚವಾಗಲಿದೆ. ಬೆಂಬಲ ಬೆಲೆ ನೀಡಿ ಖರೀದಿ ಮಾಡಿದ ಭತ್ತವನ್ನು ಸ್ಥಳೀಯವಾಗಿಯೇ ಸಂಸ್ಕರಿಸುವುದಾಗಿ ತಿಳಿಸಿದರು.

ಉಡುಪಿ: ಕರ್ತವ್ಯಲೋಪ -ಬೈಂದೂರು BEO ಮಂಜುನಾಥ್‌ ಅಮಾನತು ಮಾಡಿದ ಸರ್ಕಾರ – Vishwanews24

ಆತ್ಮರಕ್ಷಣೆ ಕಲೆ ಸಂಬಂಧ ಸಮವಸ್ತ್ರ ಖರೀದಿಗೆ ಹೆಚ್ಚುವರಿ ಹಣದ ಅಗತ್ಯ ಇದೆ. ಈಗಾಗಲೇ ಕರಾಟೆ ಕಲಿಯುವ ವಿದ್ಯಾರ್ಥಿನಿಯರಿಗೆ ಸಮವಸ್ತ್ರಕ್ಕಾಗಿ 176 ಕೋಟಿ ರೂ. ಬಾಕಿ ಇತ್ತು. ಅದನ್ನು ಪಾವತಿಸಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago