Featured

ಜನವರಿಯಿಂದ ಕರಾವಳಿ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕುಚಲಕ್ಕಿ ಲಭ್ಯ – Vishwanews24

ಜನವರಿಯಿಂದ ಕರಾವಳಿ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕುಚಲಕ್ಕಿ ಲಭ್ಯ

ಬೆಂಗಳೂರು: ಬೆಂಬಲ ಬೆಲೆಯಡಿ ಕುಚಲಕ್ಕಿ ಖರೀದಿಗೆ ರಾಜ್ಯ ಸರಕಾರ ತೀರ್ಮಾನಿಸಿದ್ದು, ಜನವರಿಯಿಂದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪಡಿತರದಲ್ಲಿ ಲಭ್ಯವಾಗಲಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿಯ ಮೂರೂ ಜಿಲ್ಲೆಗಳ 6.20 ಲಕ್ಷ ಪಡಿತರ ಚೀಟಿದಾರರಿಗೆ ಜನವರಿಯಿಂದ ಕೆಂಪು ಕುಚಲಕ್ಕಿಯನ್ನು ವಿತರಿಸಲಾಗುವುದು. ಎರಡು ಕೆ.ಜಿ. ಸಾಮಾನ್ಯ ಅಕ್ಕಿ, ಮೂರು ಕೆ.ಜಿ. ಕುಚಲಕ್ಕಿ ನೀಡಲಾಗುತ್ತದೆ ಎಂದರು.

ಬೆಂಗಳೂರು : ದ.ಭಾರತದ ಮೊಟ್ಟ ಮೊದಲ ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ – Vishwanews24

ಕುಚಲಕ್ಕಿಯನ್ನು ಪಡಿತರ ಮೂಲಕ ಪೂರೈಸಬೇಕೆಂದು ಮೂರೂ ಜಿಲ್ಲೆಗಳ ಜನರು ಆಗ್ರಹಿಸಿದ್ದು, ಇದಕ್ಕೆ ಈಗ ಮುಖ್ಯಮಂತ್ರಿ ಒಪ್ಪಿದ್ದಾರೆ ಎಂದರು.

ಡಿಸೆಂಬರ್‌ನಲ್ಲಿ ಕುಚಲಕ್ಕಿ ಭತ್ತ (ಜಯ, ಎಂಒ4, ಅಭಿಲಾಷಾ, ಜ್ಯೋತಿ ತಳಿ) ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತದೆ. ಅದಕ್ಕೆ ಹೆಚ್ಚುವರಿ ಮೊತ್ತ ಕೊಡಲು ರಾಜ್ಯ ಸರಕಾರ ಸಮ್ಮತಿಸಿದೆ ಎಂದರು.

ಈಗ ಕೇಂದ್ರ ಸರಕಾರ ಭತ್ತಕ್ಕೆ ಬೆಂಬಲ ಬೆಲೆಗೆ ಪ್ರತಿ ಕ್ವಿಂಟಾಲ…ಗೆ 2,040 ರೂ. ಕೊಡುತ್ತಿದೆ. ನಾವು ಕುಚಲಕ್ಕಿ ಭತ್ತಕ್ಕೆ 500 ರೂ. ಹೆಚ್ಚುವರಿಯಾಗಿ ಸೇರಿಸಿ ಒಟ್ಟು 2,540 ರೂ. ಬೆಲೆಗೆ ಖರೀದಿಸುತ್ತೇವೆ. 13 ಲಕ್ಷ ಕ್ವಿಂಟಾಲ… ಭತ್ತ ಖರೀದಿಯ ಗುರಿ ಇದೆ. ಇದಕ್ಕೆ 132 ಕೋಟಿ ರೂ.ವೆಚ್ಚವಾಗಲಿದೆ. ಬೆಂಬಲ ಬೆಲೆ ನೀಡಿ ಖರೀದಿ ಮಾಡಿದ ಭತ್ತವನ್ನು ಸ್ಥಳೀಯವಾಗಿಯೇ ಸಂಸ್ಕರಿಸುವುದಾಗಿ ತಿಳಿಸಿದರು.

ಉಡುಪಿ: ಕರ್ತವ್ಯಲೋಪ -ಬೈಂದೂರು BEO ಮಂಜುನಾಥ್‌ ಅಮಾನತು ಮಾಡಿದ ಸರ್ಕಾರ – Vishwanews24

ಆತ್ಮರಕ್ಷಣೆ ಕಲೆ ಸಂಬಂಧ ಸಮವಸ್ತ್ರ ಖರೀದಿಗೆ ಹೆಚ್ಚುವರಿ ಹಣದ ಅಗತ್ಯ ಇದೆ. ಈಗಾಗಲೇ ಕರಾಟೆ ಕಲಿಯುವ ವಿದ್ಯಾರ್ಥಿನಿಯರಿಗೆ ಸಮವಸ್ತ್ರಕ್ಕಾಗಿ 176 ಕೋಟಿ ರೂ. ಬಾಕಿ ಇತ್ತು. ಅದನ್ನು ಪಾವತಿಸಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

10 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

10 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

10 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

10 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago