ಬೆಂಗಳೂರು: ಬೆಂಬಲ ಬೆಲೆಯಡಿ ಕುಚಲಕ್ಕಿ ಖರೀದಿಗೆ ರಾಜ್ಯ ಸರಕಾರ ತೀರ್ಮಾನಿಸಿದ್ದು, ಜನವರಿಯಿಂದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪಡಿತರದಲ್ಲಿ ಲಭ್ಯವಾಗಲಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿಯ ಮೂರೂ ಜಿಲ್ಲೆಗಳ 6.20 ಲಕ್ಷ ಪಡಿತರ ಚೀಟಿದಾರರಿಗೆ ಜನವರಿಯಿಂದ ಕೆಂಪು ಕುಚಲಕ್ಕಿಯನ್ನು ವಿತರಿಸಲಾಗುವುದು. ಎರಡು ಕೆ.ಜಿ. ಸಾಮಾನ್ಯ ಅಕ್ಕಿ, ಮೂರು ಕೆ.ಜಿ. ಕುಚಲಕ್ಕಿ ನೀಡಲಾಗುತ್ತದೆ ಎಂದರು.
ಬೆಂಗಳೂರು : ದ.ಭಾರತದ ಮೊಟ್ಟ ಮೊದಲ ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ – Vishwanews24
ಕುಚಲಕ್ಕಿಯನ್ನು ಪಡಿತರ ಮೂಲಕ ಪೂರೈಸಬೇಕೆಂದು ಮೂರೂ ಜಿಲ್ಲೆಗಳ ಜನರು ಆಗ್ರಹಿಸಿದ್ದು, ಇದಕ್ಕೆ ಈಗ ಮುಖ್ಯಮಂತ್ರಿ ಒಪ್ಪಿದ್ದಾರೆ ಎಂದರು.
ಡಿಸೆಂಬರ್ನಲ್ಲಿ ಕುಚಲಕ್ಕಿ ಭತ್ತ (ಜಯ, ಎಂಒ4, ಅಭಿಲಾಷಾ, ಜ್ಯೋತಿ ತಳಿ) ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತದೆ. ಅದಕ್ಕೆ ಹೆಚ್ಚುವರಿ ಮೊತ್ತ ಕೊಡಲು ರಾಜ್ಯ ಸರಕಾರ ಸಮ್ಮತಿಸಿದೆ ಎಂದರು.
ಈಗ ಕೇಂದ್ರ ಸರಕಾರ ಭತ್ತಕ್ಕೆ ಬೆಂಬಲ ಬೆಲೆಗೆ ಪ್ರತಿ ಕ್ವಿಂಟಾಲ…ಗೆ 2,040 ರೂ. ಕೊಡುತ್ತಿದೆ. ನಾವು ಕುಚಲಕ್ಕಿ ಭತ್ತಕ್ಕೆ 500 ರೂ. ಹೆಚ್ಚುವರಿಯಾಗಿ ಸೇರಿಸಿ ಒಟ್ಟು 2,540 ರೂ. ಬೆಲೆಗೆ ಖರೀದಿಸುತ್ತೇವೆ. 13 ಲಕ್ಷ ಕ್ವಿಂಟಾಲ… ಭತ್ತ ಖರೀದಿಯ ಗುರಿ ಇದೆ. ಇದಕ್ಕೆ 132 ಕೋಟಿ ರೂ.ವೆಚ್ಚವಾಗಲಿದೆ. ಬೆಂಬಲ ಬೆಲೆ ನೀಡಿ ಖರೀದಿ ಮಾಡಿದ ಭತ್ತವನ್ನು ಸ್ಥಳೀಯವಾಗಿಯೇ ಸಂಸ್ಕರಿಸುವುದಾಗಿ ತಿಳಿಸಿದರು.
ಉಡುಪಿ: ಕರ್ತವ್ಯಲೋಪ -ಬೈಂದೂರು BEO ಮಂಜುನಾಥ್ ಅಮಾನತು ಮಾಡಿದ ಸರ್ಕಾರ – Vishwanews24
ಆತ್ಮರಕ್ಷಣೆ ಕಲೆ ಸಂಬಂಧ ಸಮವಸ್ತ್ರ ಖರೀದಿಗೆ ಹೆಚ್ಚುವರಿ ಹಣದ ಅಗತ್ಯ ಇದೆ. ಈಗಾಗಲೇ ಕರಾಟೆ ಕಲಿಯುವ ವಿದ್ಯಾರ್ಥಿನಿಯರಿಗೆ ಸಮವಸ್ತ್ರಕ್ಕಾಗಿ 176 ಕೋಟಿ ರೂ. ಬಾಕಿ ಇತ್ತು. ಅದನ್ನು ಪಾವತಿಸಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…