Featured

ಜನವರಿ 14ರಿಂದ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಣಿಪುರ To ಮುಂಬೈ ಭಾರತ್‌ ನ್ಯಾಯ ಯಾತ್ರೆ – vishwanews24

ಜನವರಿ 14ರಿಂದ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಣಿಪುರ To ಮುಂಬೈ ಭಾರತ್‌ ನ್ಯಾಯ ಯಾತ್ರೆ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌ ಪಕ್ಷ ಇದೀಗ ದೇಶದ ಈಶಾನ್ಯ ಮತ್ತು ಪಶ್ಚಿಮ ರಾಜ್ಯಗಳನ್ನು ಸಂಪರ್ಕಿಸುವ ಯಾತ್ರೆ ರಾಹುಲ್‌ ಗಾಂಧಿ ಸಾರಥ್ಯದಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್‌ ಘೋಷಿಸಿದೆ. ಜನವರಿ 14ರಿಂದ ಮಣಿಪುರದಿಂದ ಮುಂಬೈವರೆಗೆ “ಭಾರತ್‌ ನ್ಯಾಯ ಯಾತ್ರೆ ನಡೆಯಲಿದೆ.

ಮಣಿಪುರದಿಂದ ಮುಂಬೈವರೆಗಿನ ಸುಮಾರು 6,200 ಕಿಲೋ ಮೀಟರ್‌ ದೂರದ ಈ ಯಾತ್ರೆ ಜನವರಿ 14ರಿಂದ ಆರಂಭಗೊಳ್ಳಲಿದ್ದು, ಮಾರ್ಚ್‌ 20ರಂದು ಕೊನೆಗೊಳ್ಳಲಿದೆ ಎಂದು ವರದಿ ತಿಳಿಸಿದೆ.

ಕಳೆದ ವರ್ಷ ರಾಹುಲ್‌ ಗಾಂಧಿ ದಕ್ಷಿಣ ಮತ್ತು ಉತ್ತರದ ರಾಜ್ಯಗಳನ್ನು ಸಂಪರ್ಕಿಸುವ ಭಾರತ್‌ ಜೋಡೋ ಯಾತ್ರೆ ಕೈಗೊಂಡಿದ್ದು, ಇದರ ಪರಿಣಾಮ ದಕ್ಷಿಣದ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಲಾಭ ತಂದುಕೊಟ್ಟಿರುವುದಾಗಿ ವರದಿ ವಿಶ್ಲೇಷಿಸಿದೆ.

ಭಾರತ್‌ ನ್ಯಾಯ ಯಾತ್ರೆಯ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್‌ ವಿರುದ್ಧ ವ್ಯಂಗ್ಯವಾಡಿರುವ ಬಿಜೆಪಿ, ಜನರು ಭಾರತ್‌ ಜೋಡೋ ಯಾತ್ರೆಯನ್ನು ತಿರಸ್ಕರಿಸಿರುವುದಾಗಿ ಟೀಕಿಸಿದೆ.

ಭಾರತ್‌ ನ್ಯಾಯ ಯಾತ್ರೆಗೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರು ಇಂಫಾಲ್‌ ನಲ್ಲಿ ಹಸಿರು ನಿಶಾನೆ ಮೂಲಕ ಚಾಲನೆ ನೀಡಲಿದ್ದು, ರಾಹುಲ್‌ ಗಾಂಧಿ ನೇತೃತ್ವದ ಈ ಯಾತ್ರೆಯು 14 ರಾಜ್ಯಗಳ 85 ಜಿಲ್ಲೆಗಳಲ್ಲಿ ಹಾದು ಹೋಗಲಿದೆ ಎಂದು ವರದಿ ತಿಳಿಸಿದೆ.

ಕಾಂಗ್ರೆಸ್‌ ಪಕ್ಷದ ಭಾರತ್‌ ನ್ಯಾಯ ಯಾತ್ರೆಯು ಮಣಿಪುರ, ನಾಗಾಲ್ಯಾಂಡ್‌, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಛತ್ತೀಸ್‌ ಗಢ್‌, ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ್‌, ಗುಜರಾತ್‌ ಮತ್ತು ಮಹಾರಾಷ್ಟ್ರ ಒಳಗೊಂಡಿರುವುದಾಗಿ ತಿಳಿಸಿದೆ.

ಭಾರತ್‌ ನ್ಯಾಯ ಯಾತ್ರೆಯು ದೇಶದ ಜನರಿಗೆ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ನ್ಯಾಯವನ್ನು ಖಾತರಿಪಡಿಸುವುದಾಗಿದೆ ಎಂದು ಕಾಂಗ್ರೆಸ್‌ ಪಕ್ಷ ಹೇಳಿದೆ

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

15 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago