ಕುಂದಾಪುರ: ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಮಕರ ಸಂಕ್ರಮಣ ಉತ್ಸವ ಜನವರಿ 14ರಿಂದ 16 ರ ತನಕ ಕೋವಿಡ್ ನಿಯಮಾವಳಿಯಂತೆ ಸರಳವಾಗಿ ಹಾಗೂ ಸಂಪ್ರದಾಯಬದ್ಧವಾಗಿ ನಡೆಯಲಿದೆ.
ಪ್ರತಿವರ್ಷ ಮಕರ ಸಂಕ್ರಮಣದಂದು ನಡೆಯುವ ಗೆಂಡಸೇವೆಯಲ್ಲಿ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಸಹಸ್ರಾರು ಭಕ್ತರು ಪಾಲ್ಘೊಳ್ಳುತ್ತಿದ್ದು ಈ ಬಾರಿ ಕೊರೋನಾ ಹಿನ್ನೆಲೆ ಭಕ್ತಾಧಿಗಳಿಗೆ ಗೆಂಡಸೇವೆಗೆ ಅವಕಾಶವಿಲ್ಲ. ಗುರುವಾರ ಮಧ್ಯಾಹ್ನ ಸನ್ನಿಧಿಯಲ್ಲಿ ನಡೆಯುವ ಮಹಾಮಂಗಳಾರತಿ ಈ ಬಾರಿ ಬೆಳಿಗ್ಗೆ 8.30ಕ್ಕೆ ನಡೆಯಲಿದೆ. ಹೊರಗಿನಿಂದ ಬರುವ ಅಂಗಡಿಗಳಿಗೆ ಅವಕಾಶವಿಲ್ಲ.
ಹೆಮ್ಮಾಡಿ ಸೇವಂತಿಗೆ ದೇವರಿಗೆ ಅರ್ಪಿಸುವುದು ಸಂಪ್ರದಾಯವಾದ್ದರಿಂದ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಅನ್ನದಾನವು ಕೂಡ ಸಾಮಾಜಿಕ ಅಂತರ ಪಾಲನೆಯೊಂದಿಗೆ ನಡೆಯಲಿದೆ. ಗೆಂಡ ಸೇವೆ ಹೊರತುಪಡಿಸಿ ಇತರ ಕೆಲ ಸೇವೆಗಳು ಸಾಂಪ್ರದಾಯಿಕವಾಗಿ ನಡೆಯಲಿದೆ.
ದೇವಳಕ್ಕೆ ಆಗಮಿಸುವ ಭಕ್ತರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ, ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಬಳಸುವುದು ಕಡ್ಡಾಯವಾಗಿದೆ ಎಂದು ದೇವಳದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ
http://ರಾಜ್ಯಕ್ಕೆ ಮೊದಲ ಹಂತದಲ್ಲಿ ಕೊರೊನಾ ಲಸಿಕೆಯ 7.95 ಲಕ್ಷ ವೈಲ್ ಗಳು ಬರಲಿವೆ : ಡಾ.ಕೆ.ಸುಧಾಕರ್ -Vishwanews24
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…