ಕುಂದಾಪುರ: ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಮಕರ ಸಂಕ್ರಮಣ ಉತ್ಸವ ಜನವರಿ 14ರಿಂದ 16 ರ ತನಕ ಕೋವಿಡ್ ನಿಯಮಾವಳಿಯಂತೆ ಸರಳವಾಗಿ ಹಾಗೂ ಸಂಪ್ರದಾಯಬದ್ಧವಾಗಿ ನಡೆಯಲಿದೆ.
ಪ್ರತಿವರ್ಷ ಮಕರ ಸಂಕ್ರಮಣದಂದು ನಡೆಯುವ ಗೆಂಡಸೇವೆಯಲ್ಲಿ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಸಹಸ್ರಾರು ಭಕ್ತರು ಪಾಲ್ಘೊಳ್ಳುತ್ತಿದ್ದು ಈ ಬಾರಿ ಕೊರೋನಾ ಹಿನ್ನೆಲೆ ಭಕ್ತಾಧಿಗಳಿಗೆ ಗೆಂಡಸೇವೆಗೆ ಅವಕಾಶವಿಲ್ಲ. ಗುರುವಾರ ಮಧ್ಯಾಹ್ನ ಸನ್ನಿಧಿಯಲ್ಲಿ ನಡೆಯುವ ಮಹಾಮಂಗಳಾರತಿ ಈ ಬಾರಿ ಬೆಳಿಗ್ಗೆ 8.30ಕ್ಕೆ ನಡೆಯಲಿದೆ. ಹೊರಗಿನಿಂದ ಬರುವ ಅಂಗಡಿಗಳಿಗೆ ಅವಕಾಶವಿಲ್ಲ.
ಹೆಮ್ಮಾಡಿ ಸೇವಂತಿಗೆ ದೇವರಿಗೆ ಅರ್ಪಿಸುವುದು ಸಂಪ್ರದಾಯವಾದ್ದರಿಂದ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಅನ್ನದಾನವು ಕೂಡ ಸಾಮಾಜಿಕ ಅಂತರ ಪಾಲನೆಯೊಂದಿಗೆ ನಡೆಯಲಿದೆ. ಗೆಂಡ ಸೇವೆ ಹೊರತುಪಡಿಸಿ ಇತರ ಕೆಲ ಸೇವೆಗಳು ಸಾಂಪ್ರದಾಯಿಕವಾಗಿ ನಡೆಯಲಿದೆ.
ದೇವಳಕ್ಕೆ ಆಗಮಿಸುವ ಭಕ್ತರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ, ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಬಳಸುವುದು ಕಡ್ಡಾಯವಾಗಿದೆ ಎಂದು ದೇವಳದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ
http://ರಾಜ್ಯಕ್ಕೆ ಮೊದಲ ಹಂತದಲ್ಲಿ ಕೊರೊನಾ ಲಸಿಕೆಯ 7.95 ಲಕ್ಷ ವೈಲ್ ಗಳು ಬರಲಿವೆ : ಡಾ.ಕೆ.ಸುಧಾಕರ್ -Vishwanews24
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…