ಮಂಗಳೂರು : ಭಾರತೀಯರ ಶತಮಾನದ ಕನಸು ನನಸಾಗುತ್ತಿದೆ, ಸುದೀರ್ಘ ಹೋರಾಟದ ಬಳಿಕ ಆಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗುತ್ತಿದೆ. ಮಕರಸಂಕ್ರಾಂತಿ ಮುಗಿಯುತ್ತಿದ್ದಂತೆ ರಾಮದೇವರ ಪ್ರಾಣ ಪ್ರತಿಷ್ಠೆಯಾಗಲಿದೆ ಎಂದು ಉಡುಪಿ ಪೇಜಾವರ ಮಠಾಧೀಶರಾದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಸ್ವಾಮೀಜಿ ಜನವರಿ 22ರ ಅಭಿಜಿತ್ ಮುಹೂರ್ತದಲ್ಲಿ ರಾಮದೇವರ ಪ್ರಾಣ ಪ್ರತಿಷ್ಠೆಯಾಗಲಿದ್ದು ಪ್ರಧಾನಿ ಮೋದಿ ಮಂದಿರವನ್ನು ಲೋಕಾರ್ಪಣೆ ಮಾಡಲಿದ್ದಾರೆ ಆದ್ರೆ ಆದಿನ ಎಲ್ಲರಿಗೂ ಬರಲು ಅವಕಾಶ ಇರೋದಿಲ್ಲ. ಹೀಗಾಗಿ ಎಲ್ಲರೂ ಊರ ರಾಮಮಂದಿರದಲ್ಲಿ ಬೃಹತ್ ಪರದೆಯ ಮೂಲಕ ಕಾರ್ಯಕ್ರಮ ವೀಕ್ಷಣೆ ಮಾಡಬೇಕು. ಮತ್ತು ಮಂದಿರದಲ್ಲಿ ಪೂಜೆ ಭಜನೆ ಪ್ರಸಾದ ವಿತರಣೆ ಮಾಡಬೇಕು. ಪ್ರಾಣ ಪ್ರತಿಷ್ಠೆ ಆದ ಬಳಿಕ ಮಂಡಲ ಉತ್ಸವ ನಡೆಯುತ್ತದೆ ಬಳಿಕ ನಿತ್ಯ ಅಭಿಷೇಕ ಸೇರಿದಂತೆ ವಿವಿಧ ಪೂಜೆ ಪುನಸ್ಕಾರಗಳು ನಡೆಯಲಿದೆ. ಜನವರಿ 23ರಿಂದ ಮಾರ್ಚ್ 10ರವರಗೆ ಉತ್ಸವ ನಡೆಯುತ್ತದೆ. ಆ ಸಂಧರ್ಭದಲ್ಲಿ ಎಲ್ಲರೂ ಬಂದು ಪೂಜೆ ಸಲ್ಲಿಸಬಹುದಾಗಿದ್ದು ರಾಮ ಮಂದಿರದಲ್ಲಿ ಸೇವಾ ರೂಪದ ಪಟ್ಟಿ ಇರೋದಿಲ್ಲ ವೆಂದ ಸ್ವಾಮೀಜಿ ರಾಮಭಕ್ತಿ ಬೇರೆ ಅಲ್ಲ,ದೇಶ ಭಕ್ತಿ ಬೇರೆ ಅಲ್ಲ, ರಾಮ ಸೇವೆ ಮಾಡುವ ಇಚ್ಛೆಯವರು ದೇಶಸೇವೆ ಮಾಡೋಣ ಎಂದು ಕರೆ ನೀಡಿದರು.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…