ಮಂಗಳೂರು : ಭಾರತೀಯರ ಶತಮಾನದ ಕನಸು ನನಸಾಗುತ್ತಿದೆ, ಸುದೀರ್ಘ ಹೋರಾಟದ ಬಳಿಕ ಆಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗುತ್ತಿದೆ. ಮಕರಸಂಕ್ರಾಂತಿ ಮುಗಿಯುತ್ತಿದ್ದಂತೆ ರಾಮದೇವರ ಪ್ರಾಣ ಪ್ರತಿಷ್ಠೆಯಾಗಲಿದೆ ಎಂದು ಉಡುಪಿ ಪೇಜಾವರ ಮಠಾಧೀಶರಾದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಸ್ವಾಮೀಜಿ ಜನವರಿ 22ರ ಅಭಿಜಿತ್ ಮುಹೂರ್ತದಲ್ಲಿ ರಾಮದೇವರ ಪ್ರಾಣ ಪ್ರತಿಷ್ಠೆಯಾಗಲಿದ್ದು ಪ್ರಧಾನಿ ಮೋದಿ ಮಂದಿರವನ್ನು ಲೋಕಾರ್ಪಣೆ ಮಾಡಲಿದ್ದಾರೆ ಆದ್ರೆ ಆದಿನ ಎಲ್ಲರಿಗೂ ಬರಲು ಅವಕಾಶ ಇರೋದಿಲ್ಲ. ಹೀಗಾಗಿ ಎಲ್ಲರೂ ಊರ ರಾಮಮಂದಿರದಲ್ಲಿ ಬೃಹತ್ ಪರದೆಯ ಮೂಲಕ ಕಾರ್ಯಕ್ರಮ ವೀಕ್ಷಣೆ ಮಾಡಬೇಕು. ಮತ್ತು ಮಂದಿರದಲ್ಲಿ ಪೂಜೆ ಭಜನೆ ಪ್ರಸಾದ ವಿತರಣೆ ಮಾಡಬೇಕು. ಪ್ರಾಣ ಪ್ರತಿಷ್ಠೆ ಆದ ಬಳಿಕ ಮಂಡಲ ಉತ್ಸವ ನಡೆಯುತ್ತದೆ ಬಳಿಕ ನಿತ್ಯ ಅಭಿಷೇಕ ಸೇರಿದಂತೆ ವಿವಿಧ ಪೂಜೆ ಪುನಸ್ಕಾರಗಳು ನಡೆಯಲಿದೆ. ಜನವರಿ 23ರಿಂದ ಮಾರ್ಚ್ 10ರವರಗೆ ಉತ್ಸವ ನಡೆಯುತ್ತದೆ. ಆ ಸಂಧರ್ಭದಲ್ಲಿ ಎಲ್ಲರೂ ಬಂದು ಪೂಜೆ ಸಲ್ಲಿಸಬಹುದಾಗಿದ್ದು ರಾಮ ಮಂದಿರದಲ್ಲಿ ಸೇವಾ ರೂಪದ ಪಟ್ಟಿ ಇರೋದಿಲ್ಲ ವೆಂದ ಸ್ವಾಮೀಜಿ ರಾಮಭಕ್ತಿ ಬೇರೆ ಅಲ್ಲ,ದೇಶ ಭಕ್ತಿ ಬೇರೆ ಅಲ್ಲ, ರಾಮ ಸೇವೆ ಮಾಡುವ ಇಚ್ಛೆಯವರು ದೇಶಸೇವೆ ಮಾಡೋಣ ಎಂದು ಕರೆ ನೀಡಿದರು.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…