Featured

ಜನವರಿ 24 ನಾಳೆ ರಾಜ್ಯಾದ್ಯಂತ ಕೇಬಲ್ ಟಿವಿ ಬಂದ್..- Vishwanews24

ಬೆಂಗಳೂರು: ಜನವರಿ 24 ಅಂದರೆ ನಾಳೆ ರಾಜ್ಯಾದ್ಯಂತ ಕೇಬಲ್‌ ಟಿವಿ ಸ್ಥಗಿತಗೊಳಿಸಲು ಕೇಬಲ್‌ ಆಪರೇಟರ್‌ಗಳು ನಿರ್ಧರಿಸಿದ್ದಾರೆ. ಟ್ರಾಯ್‌ ಹೊಸ ದರ ನಿಗದಿ ನಿಯಮವನ್ನು ಖಂಡಿಸಿ ರಾಜ್ಯ ಕೇಬಲ್‌ ಆಪರೇಟರ್ಸ್‌ ಅಸೋಸಿಯೇಷನ್‌ ಈ ನಿರ್ಧಾರ ಕೈಗೊಂಡಿದೆ.

ಕೇಬಲ್ ಆಪರೇಟರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಪ್ಯಾಟ್ರಿಕ್ ರಾಜು ಮಾತನಾಡಿ, ಗ್ರಾಹಕರು ಮತ್ತು ಕೇಬಲ್ ಆಪರೇಟರ್ ಗಳ ಹಿತದೃಷ್ಟಿಯಿಂದ ದಕ್ಷಿಣ ಭಾರತದಾದ್ಯಂತ ಕೇಬಲ್ ಟಿವಿ ಬಂದ್ ಮಾಡಲು ತೀರ್ಮಾನಿಸಲಾಗಿದೆ. ಹಾಗಾಗಿ ಕರ್ನಾಟಕದಲ್ಲೂ  ಕೇಬಲ್ ಟಿವಿಗಳು ಬಂದ್ ಆಗಲಿವೆ ಎಂದು ತಿಳಿಸಿದರು.

ದಕ್ಷಿಣ ಭಾರತ ಮಾತ್ರವಲ್ಲದೇ ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಜನವರಿ 24 ರಂದು ಕೇಬಲ್ ಟಿವಿ ಆಪರೇಟಿಂಗ್ ಸಿಸ್ಟಂ ಸ್ಥಗಿತಗೊಳಿಸಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಗ್ರಾಹಕರಿಗೆ ಮಾಧ್ಯಮಗಳ ಮೂಲಕ ಮಾಹಿತಿ ನೀಡಲಾಗಿದೆ. ಒಂದು ದಿನದ ಮಟ್ಟಿಗೆ ಸಾಂಕೇತಿಕವಾಗಿ ಟಿವಿ ಚಾನಲ್ ಬಂದ್ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಕೂಡಲೇ ಈ ನೀತಿಯನ್ನು ಹಿಂಪಡೆಯಬೇಕು ಇಲ್ಲವಾದರೆ ಟಿವಿ ಆಪರೇಟರ್ ಗಳು ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಹೇಳಿದ್ದಾರೆ.

ಹಾಗಾಗಿ ರಾಜ್ಯ ಕೇಬಲ್ ಆಪರೇಟರ್ಸ್ ಅಸೋಸಿಯೇಷನ್ ನಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಜನವರಿ 24 ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯ ವರೆಗೆ ಕೇಬಲ್ ಸ್ಥಗಿತಗೊಳಿಸಲು ಒಮ್ಮತದ ತೀರ್ಮಾನ ಕೈಗೊಂಡಿದ್ದೇವೆ ಎಂದು ತಿಳಿಸಿದರು.

Vishwa News 24

Recent Posts

ಆಳ್ವಾಸ್ ಪ್ರಗತಿ – 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ – vishwanews24

ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…

23 minutes ago

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ – vishwanews24

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…

31 minutes ago

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ – vishwanews24

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…

59 minutes ago

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ – vishwanews24

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…

1 hour ago

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ.ಕೆ ಭಟ್ ನಿಧನ – vishwanews24

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…

1 hour ago

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ – vishwanews24

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…

1 hour ago