ಬೆಂಗಳೂರು: ಜನವರಿ 24 ಅಂದರೆ ನಾಳೆ ರಾಜ್ಯಾದ್ಯಂತ ಕೇಬಲ್ ಟಿವಿ ಸ್ಥಗಿತಗೊಳಿಸಲು ಕೇಬಲ್ ಆಪರೇಟರ್ಗಳು ನಿರ್ಧರಿಸಿದ್ದಾರೆ. ಟ್ರಾಯ್ ಹೊಸ ದರ ನಿಗದಿ ನಿಯಮವನ್ನು ಖಂಡಿಸಿ ರಾಜ್ಯ ಕೇಬಲ್ ಆಪರೇಟರ್ಸ್ ಅಸೋಸಿಯೇಷನ್ ಈ ನಿರ್ಧಾರ ಕೈಗೊಂಡಿದೆ.
ಕೇಬಲ್ ಆಪರೇಟರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಪ್ಯಾಟ್ರಿಕ್ ರಾಜು ಮಾತನಾಡಿ, ಗ್ರಾಹಕರು ಮತ್ತು ಕೇಬಲ್ ಆಪರೇಟರ್ ಗಳ ಹಿತದೃಷ್ಟಿಯಿಂದ ದಕ್ಷಿಣ ಭಾರತದಾದ್ಯಂತ ಕೇಬಲ್ ಟಿವಿ ಬಂದ್ ಮಾಡಲು ತೀರ್ಮಾನಿಸಲಾಗಿದೆ. ಹಾಗಾಗಿ ಕರ್ನಾಟಕದಲ್ಲೂ ಕೇಬಲ್ ಟಿವಿಗಳು ಬಂದ್ ಆಗಲಿವೆ ಎಂದು ತಿಳಿಸಿದರು.
ದಕ್ಷಿಣ ಭಾರತ ಮಾತ್ರವಲ್ಲದೇ ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಜನವರಿ 24 ರಂದು ಕೇಬಲ್ ಟಿವಿ ಆಪರೇಟಿಂಗ್ ಸಿಸ್ಟಂ ಸ್ಥಗಿತಗೊಳಿಸಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಗ್ರಾಹಕರಿಗೆ ಮಾಧ್ಯಮಗಳ ಮೂಲಕ ಮಾಹಿತಿ ನೀಡಲಾಗಿದೆ. ಒಂದು ದಿನದ ಮಟ್ಟಿಗೆ ಸಾಂಕೇತಿಕವಾಗಿ ಟಿವಿ ಚಾನಲ್ ಬಂದ್ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಕೂಡಲೇ ಈ ನೀತಿಯನ್ನು ಹಿಂಪಡೆಯಬೇಕು ಇಲ್ಲವಾದರೆ ಟಿವಿ ಆಪರೇಟರ್ ಗಳು ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಹೇಳಿದ್ದಾರೆ.
ಹಾಗಾಗಿ ರಾಜ್ಯ ಕೇಬಲ್ ಆಪರೇಟರ್ಸ್ ಅಸೋಸಿಯೇಷನ್ ನಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಜನವರಿ 24 ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯ ವರೆಗೆ ಕೇಬಲ್ ಸ್ಥಗಿತಗೊಳಿಸಲು ಒಮ್ಮತದ ತೀರ್ಮಾನ ಕೈಗೊಂಡಿದ್ದೇವೆ ಎಂದು ತಿಳಿಸಿದರು.
50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…
ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ…
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…